ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅನಿರ್ಧಾಷ್ಟಾವಧಿ ಧರಣಿ ಸತ್ಯಾಗ್ರಹ

ಬೆಂಗಳೂರು :ವಸತಿ ಶಾಲೆಗಳ ನಿರ್ದೇಶನಾಲಯ ರಚನೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಕ್ರೈಸ್ ಕಾಯಂ ಶಿಕ್ಷಕರು ಹಾಗೂ ನೌಕರರು ಇಂದಿನಿಂದ ಬೆಂಗಳೂರಿನ ಫ಼್ರೀಂಡಂ ಪಾರ್ಕ್ ನಲ್ಲಿ ಅನಿರ್ಧಾಷ್ಟವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಬಡ ಮತ್ತು ಹಿಂದುಳಿದ ವರ್ಗಗಳ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎನ್ನುವ ಉದ್ದೇಶದಿಂದ ರಚಿತವಾದ ವಸತಿ ಶಾಲೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲು ಆ ಬೆಳವಣಿಗೆಗೆ ಕಾರಣೀಭೂತರಾದಂತಹ ವಸತಿ ಶಾಲೆಗಳ ಕಾಯಂ ಶಿಕ್ಷಕ ಮತ್ತು ಇತರ ಸಿಬ್ಬಂದಿಗಳಿಗೆ ಅವಶ್ಯಕತೆ ಇರುವಂತಹ ಸೌಲಭ್ಯಗಳನ್ನು ಒದಗಿಸುವಲ್ಲಿ ಮೌನವಾಗಿರುವುದು ವಿಪರ್ಯಾಸಕ್ಕೆ ಕಾರಣವಾಗಿದೆ.
ಕೇಂದ್ರ ಸರ್ಕಾರದ ನವೋದಯ ಶಾಲೆಗಳ ಮಾದರಿಯಲ್ಲಿ ಈ ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು ಅಲ್ಲಿರುವ ಶಿಕ್ಷಕರ ಸೌಲಭ್ಯಗಳಿಗೆ ಹೋಲಿಕೆ ಮಾಡಿದ ಕ್ರೈಸ್ ನ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಸೌಲಭ್ಯಗಳು ಕಡಿಮೆ ಮತ್ತು ರಾಜ್ಯ ಸರ್ಕಾರ ನೌಕರರಿಗೆ ಇರುವಂತಹ ಸೌಲತ್ತುಗಳು ಈ ಶಾಲೆ ಶಿಕ್ಷಕರಿಗೆ ಇರದೇ ಇರುವುದು ಅವರ ಸತತ 13 ವರ್ಷಗಳ ಹೋರಾಟದ ಮೂಲ ವಸ್ತುವಾಗಿದೆ. ಈ ಕ್ರೈಸ್ನ ಅಡಿಯಲ್ಲಿ ಪ್ರಸ್ತುತ 134 ವಸತಿ ಶಾಲೆಗಳು ನಡೆಯುತ್ತಿದ್ದು ಸರಿ ಸುಮಾರಾಗಿ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಉಚಿತ ವಸತಿ ಮತ್ತು ಶಿಕ್ಷಣವನ್ನು ಪಡೆದುಕೊಳ್ಳುತ್ತಿದ್ದಾರೆ ಈ ಶಾಲೆಗಳಲ್ಲಿ ಕಲಿತ ಮಕ್ಕಳ ಸಮಾಜದ ಉನ್ನತ ಹುದ್ದೆಗಳಲ್ಲಿ ಮತ್ತು ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳ ಫಲಿತಾಂಶ ಉತ್ತಮವಾಗಿ ವ್ಯಕ್ತವಾಗುತ್ತಿದೆ. ಆದರೆ ಮಕ್ಕಳ ಉತ್ತಮ ಬೆಳವಣಿಗೆಗೆ ಹಗಲಿರುಳು ಶ್ರಮಿಸುತ್ತಿರುವ ಶಾಲಾ ಶಿಕ್ಷಕರಿಗೆ ಕನಿಷ್ಠ ಸೌಲಭ್ಯಗಳಿಲ್ಲದಿರುವುದು ಶೋಚನೀಯ.
ಕೇಂದ್ರ ಮತ್ತು ರಾಜ್ಯ ಸರ್ಕಾರ ನೌಕರರಷ್ಟೇ ಕರ್ತವ್ಯ ನಿರ್ವಹಿಸಿದರೂ ನಮಗೇಕೆ ಅವರಿಗಿರುವ ಸವಲತ್ತುಗಳನ್ನು ನೀಡುತ್ತಿಲ್ಲ ನಾವು ಅವುಗಳಿಗೆ ಅರ್ಹರು ಎನ್ನುವ ನಿಟ್ಟಿನಲ್ಲಿ ಮೇ 26,2025 ರಿಂದ ವಿವಿಧ ಬೇಡಿಕೆಗಳನ್ನು ಅಂದರೆ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ಕಲ್ಯಾಣ ಇಲಾಖೆ ಅಡಿಯ ವಸತಿ ಶಾಲೆಗಳನ್ನು ಕಾಯಂ ಸಿಬ್ಬಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು, ನಗದು ರಹಿತ ಚಿಕಿತ್ಸೆಗಾಗಿ ಆರೋಗ್ಯ ಸಂಜೀವಿನಿ, ಜ್ಯೋತಿ ಸಂಜೀವಿನಿ ಮಾಡಬೇಕು, ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಕಲ್ಪಿಸಬೇಕು,ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡಬೇಕು, ಹೆಚ್ಚುವರಿ ಕಾರ್ಯಭಾರ ಇರುವುದರಿಂದ ಶೇಕಡಾ 10%ವಿಶೇಷ ಭತ್ಯೆ ಮಂಜೂರು ಮಾಡಬೇಕು ಎನ್ನುವ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನಿರ್ಧಿಷ್ಟಾವಧಿ ಹೋರಾಟವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕ ಸಿಬ್ಬಂದಿಗಳು ಹಮ್ಮಿಕೊಂಡಿದ್ದಾರೆ ಇದರ ಕುರಿತಾಗಿ ಮುಖ್ಯಮಂತ್ರಿಗಳು ಗಮನ ಹರಿಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವುದು ಅವರ ಆಶಯವಾಗಿದೆ.

ವರದಿ ವಿಜಯಮಹಾಂತೇಶ ಬಳಿಗಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ