
ಕೊಪ್ಪಳ : ಮುಂಗಾರು ಬಿತ್ತನೆಗೆ ರೈತರಿಗೆ ಅಗತ್ಯ ಬೀಜ-ಗೊಬ್ಬರ ವಿತರಣೆಯಲ್ಲಿ ಯಾವುದೇ ಗೊಂದಲ, ತೊಂದರೆ ಉಂಟಾಗದಂತೆ ವ್ಯವಸ್ಥಿತವಾಗಿ ವಿತರಣೆಗೆ ಕ್ರಮ ವಹಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರು ಯಲಬುರ್ಗಾ ವಿಧಾನಸಭಾ ಮತ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಸೂಚನೆ ನೀಡಿದರು.
ಕುಕುನೂರು ಪಟ್ಟಣದ ರೈತ ಸಂಪರ್ಕ ಕೇಂದ್ರದ ಸಭಾಂಗಣದಲ್ಲಿ ಸೋಮವಾರ ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಹಂಚಿಕೆಗೆ ಕೈಗೊಂಡಿರುವ ಕ್ರಮಗಳ ಕುರಿತಂತೆ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು ಯಾವುದೇ ಕೊರತೆ ಉಂಟಾಗಬಾರದು ಎಂದು ತಿಳಿಸಿದರು.
ಪರ್ಯಾಯ ರಸಗೊಬ್ಬರದ ಬಳಕೆ ಕುರಿತು ಶಾಸಕರು ಕರ ಪತ್ರ ಬಿಡುಗಡೆಗೊಳಿಸಿದರು.
ಸಹಾಯಕ ಕೃಷಿ ನಿರ್ದೇಶಕರು ಪ್ರಮೋದ ತುಂಬಳ ಕೃಷಿ ಬೀಜ ಮತ್ತು ರಸಗೊಬ್ಬರ ವಿತರಣೆ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಹೆಚ್. ಪ್ರಾಣೇಶ ತಹಶೀಲ್ದಾರರು,
ಹಮಂತಗೌಡ ಚಂಡೂರು, ಸಂಗಮೇಶ ಗುತ್ತಿ, ಸಿದ್ದಯ್ಯ ಕಳ್ಳಿಮಠ, ರೆಹ್ಮಾನ್ ಸಾಬ್ ಮುಕ್ಕಪ್ನವರ್, ಮಂಜುನಾಥ್ ಯಡೆಯಾಪುರ,
ರೈತ ಸಂಪರ್ಕ ಕೇಂದ್ರದ ಅಧಿಕಾರಿ ಬಸವರಾಜ ತೇರಿನ, ಕೃಷಿ ಅಧಿಕಾರಿ ಸಿದ್ದರಾಮ ರೆಡ್ಡಿ, ರಾಧಾ ಕೃಷಿ ವಿಜ್ಞಾನಿ, ಬಸವ ಲಿಂಗಪ್ಪ ಸಹಾಯಕ ಕೃಷಿ ಅಧಿಕಾರಿಗಳು ಹಾಗೂ ರೈತರು ಇತರರು ಇದ್ದರು.
ವರದಿ ಚನ್ನಯ್ಯ ಹಿರೇಮಠ ಕುಕನೂರು
