
ಕೊಪ್ಪಳ/ ಕುಕನೂರು :ನೂತನವಾಗಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಮೇ 27 ರಂದು ಉದ್ಘಾಟನೆ ನೆರವೇರಿಸುತ್ತಿದ್ದು ಉದ್ಘಾಟನೆ ನೆರವೇರಿಸಲು ಪಟ್ಟಣ ಪಂಚಾಯತ ಮುಖ್ಯ ಅಧಿಕಾರಿಗಳು ಹಾಗೂ ಪಟ್ಟಣ ಅಧ್ಯಕ್ಷರು ಪಂಚಾಯತ್ ಸದಸ್ಯರುಗಳು ಪಟ್ಟಣ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಪೂರ್ವ ತಯಾರಿಗಳನ್ನು ನೆರವೇರಿಸುತ್ತಿದ್ದು, ನಾಳೆ ದಿನ ಉದ್ಘಾಟನೆಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್ ವ್ಯವಸ್ಥೆಗಳನ್ನು ಸರಿಯಾದ ಕ್ರಮದಲ್ಲಿ ಪೂರ್ವ ಸಿದ್ಧತೆಗಳನ್ನು ನಡೆಸುತ್ತಿದ್ದೇವೆ ಎಂದು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ರವೀಂದ್ರ ಬಾಗಲಕೋಟೆ ಹೇಳಿದರು.
ಸಾರ್ವಜನಿಕರು ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗಮಿಸಿ ಮತ್ತು ಅತ್ಯಂತ ಕಡಿಮೆ ದರದಲ್ಲಿ ಬಡವರ ಬಂಧು ಇಂದಿರಾ ಕ್ಯಾಂಟೀನಿನಲ್ಲಿ ಆಹಾರ ಲಭ್ಯವಾಗುತ್ತಿದ್ದು ಕೂಲಿಕಾರ್ಮಿಕರು, ಹಮಾಲರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದು ಹೇಳಿದರು.
- ಕರುನಾಡ ಕಂದ
