ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪರೀಕ್ಷಕರಿಗೆ ಸೌಜನ್ಯತೆ ಇದ್ದರೆ ಯಶಸ್ವಿ ಫಲಿತಾಂಶ

ಶಿವಮೊಗ್ಗ : ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯುತ್ತಿರುವ ಭರತನಾಟ್ಯ ವಿದ್ವತ್ ಪೂರ್ವ ಮತ್ತು ವಿದ್ವತ್ ಅಂತಿಮ ಪ್ರಾಯೋಗಿಕ ಪರೀಕ್ಷೆಯ ಕೇಂದ್ರಕ್ಕೆ ಭೇಟಿ ನೀಡಿದ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ನಾಗೇಶ್ ಬೆಟಕೋಟೆ ಇವರು ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳು ನಮ್ಮ ಮಕ್ಕಳು ಎಂಬ ಭಾವನೆ ಪರೀಕ್ಷಕರಿಗೆ ಇದ್ದರೆ ಯಾವ ಗೊಂದಲಗಳಿಗೂ ಅವಕಾಶ ಇರದೆ ಪರೀಕ್ಷೆಗಳು ಯಶಸ್ವಿಯಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಿಜಿಸ್ಟ್ರಾರ್ ಡಾ. ಮಂಜುನಾಥ್, ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಅವಿನಾಶ್, ಡಾ. ಪ್ರಕಾಶ್ ಮರ್ಗನಹಳ್ಳಿ, ಪರೀಕ್ಷಾ ಸಂಯೋಜಕ ಡಾ. ಗಣೇಶ್ ಆರ್ ಕೆಂಚನಾಲ್. ವಿಶ್ವವಿದ್ಯಾಲಯದಿಂದ ಆಗಮಿಸಿದ ಡಾ. ಭುವನೇಶ್ವರಿ ಸೇರಿದಂತೆ ಡಾ. ಕೇಶವಕುಮಾರ್ ಪಿಳೈ, ಡಾ. ಶುಭ್ರತಾ ಹಾಗೂ ರಾಜ್ಯದ ನಾನಾ ಭಾಗಗಳಿಂದ ಪರೀಕ್ಷಕರು ಆಗಮಿಸಿದ್ದರು. ಹಾಗೂ ಇದೇ ಕಾಲೇಜಿನಲ್ಲಿ ಮೇ 17 ಮತ್ತು 18 ರಂದು ರಾಜ್ಯ ಮಟ್ಟದ ನೃತ್ಯ, ಸಂಗೀತ, ತಾಳವಾದ್ಯ, ಜೂನಿಯರ್ ಹಾಗೂ ಸೀನಿಯರ್ ಪ್ರಾಯೋಗಿಕ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿದ್ದವು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ