ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕರಿಂದ ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆ

ಚಾಮರಾಜನಗರ/ ಗುಂಡ್ಲುಪೇಟೆ :ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಟೂಲ್ ಕಿಟ್ ಅನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ವಿತರಣೆ ಮಾಡಿದರು.

ಪಟ್ಟಣದ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಟೂಲ್ ಕಿಟ್ ವಿತರಿಸಿ ಮಾತನಾಡಿದ ಶಾಸಕ ಎಚ್.ಎಂ.ಗಣೇಶಪ್ರಸಾದ್, ಸರ್ಕಾರದಿಂದ ಕಾರ್ಮಿಕರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದ್ದು, ಎಲ್ಲಾ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಜೊತೆಗೆ ವಿವಿಧ ಸವಲತ್ತುಗಳನ್ನು ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಮಿಕ ನಿರೀಕ್ಷಕ ಆರ್. ನಾರಾಯಣ ಮೂರ್ತಿ ಮಾತನಾಡಿ, ಸುಮಾರು 40 ಮಂದಿ ಕಾರ್ಮಿಕರಿಗೆ ಟೂಲ್ ಕಿಟ್ ಗಳನ್ನು ವಿತರಣೆ ಮಾಡಲಾಗುತ್ತಿದೆ, ಉತ್ತಮ ರೀತಿಯಲ್ಲಿ ಇದನ್ನು ಬಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು.

ಆರೋಗ್ಯ ತಪಾಸಣಾ ಶಿಬಿರ:

ಪಟ್ಟಣದ ಕಾರ್ಮಿಕ ಇಲಾಖೆ ಕಚೇರಿ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ ಆರೋಗ್ಯ ತಪಾಸಣೆ ಶಿಬಿರಕ್ಕೆ ನೂರಾರು ಮಂದಿ ಕಾರ್ಮಿಕರು ಆಗಮಿಸಿ ಕಣ್ಣು, ವಿವಿಧ ಮಾದರಿಯ ರಕ್ತ ಪರೀಕ್ಷೆ ಮಾಡಿಸಿಕೊಂಡರು.
ಈ ವೇಳೆ ತಹಸೀಲ್ದಾರ್ ಟಿ. ರಮೇಶ್ ಬಾಬು, ಕಾರ್ಮಿಕ ಇಲಾಖೆ ಸಿಬ್ಬಂದಿ ಗಣೇಶ್ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು, ಫಲಾನುಭವಿಗಳು ಹಾಜರಿದ್ದರು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ