ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಲೋಕಾರ್ಪಣೆಗೊಂಡ ಇಂದಿರಾ ಕ್ಯಾಂಟಿನ್ : ಬಡ ಮತ್ತು ಕೂಲಿ ಕಾರ್ಮಿಕರಿಗೆ ವರ : ಶಾಸಕ ಜೆ.ಎನ್.ಗಣೇಶ

ಬಳ್ಳಾರಿ / ಕಂಪ್ಲಿ; ಇಂದಿನ ದುಬಾರಿ ದಿನಮಾನದಲ್ಲಿಯೂ ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್‌ ಬಡವರಿಗೆ ವರವಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ಸ್ಥಳೀಯ ಹಳೇ ಬಸ್ ನಿಲ್ದಾಣ ಬಳಿಯಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್‌ ಬುಧವಾರ ಲೋಕಾರ್ಪಣೆಗೊಳಿಸಿದ ನಂತರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿ ನಿಂತಿದೆ. ಕಂಪ್ಲಿ ಹೃದಯ ಭಾಗದಲ್ಲಿ ಜನರಿಗೆ ಅನುಕೂಲವಾಗುವ ಸ್ಥಳದಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲಾಗಿದೆ. ಕಂಪ್ಲಿ ತಾಲೂಕು ಕೇಂದ್ರವಾಗಿದ್ದು, ಸಾಕಷ್ಟು ವಹಿವಾಟುಗಳು ಹಾಗೂ ನಗರಕ್ಕೆ ಗ್ರಾಮೀಣ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಮತ್ತು ಇಲ್ಲಿ ಬಡವರು ಮತ್ತು ಕೂಲಿಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ವಾಸಿಸುತ್ತಿದ್ದಾರೆ. ಈ ಭಾಗದ ಜನರ ಬಹಳ ದಿನಗಳ ಬೇಡಿಕೆಯಂತೆ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಗಿದೆ. ಇಂದಿರಾ ಕ್ಯಾಂಟೀನ್‌ನಲ್ಲಿ ಟಿಫಿನ್‌ಗೆ 5 ರೂ. ಊಟಕ್ಕೆ 10 ರೂಪಾಯಿ ನಿಗದಿ ಮಾಡಿದ್ದು, ಇದು ಬಡವರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.
ತದನಂತರ ಶಾಸಕ ಗಣೇಶ ಇವರು ಉಪ್ಪಿಟ್ಟು, ಕೇಸರಿಬಾತ್ ಉಪಹಾರದ ರುಚಿ ಸವಿಯುವ ಜತೆಗೆ ಜನರಿಗೆ ಉಪಹಾರ ಬಡಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಜುನಾಥ ನಾಯಕ, ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ಉಪಾಧ್ಯಕ್ಷೆ ಸುಶೀಲಮ್ಮ, ಸದಸ್ಯರಾದ ಸಿ.ಆರ್.ಹನುಮಂತ, ವೀರಾಂಜಿನೀಯಲು, ಮೌಲಾ, ಲೊಡ್ಡು ಹೊನ್ನೂರವಲಿ ಸೇರಿದಂತೆ ಸದಸ್ಯರು, ಮುಖಂಡರು, ಕಾರ್ಯಕರ್ತರು ಹಾಗೂ ಪುರಸಭೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ