ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸರ್ಕಾರಿ ಹಿರುಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಸರ್ಕಾರಿ ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹನೂರು ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರು ಭಾಗವಹಿಸಿದರು, ನಂತರ ನೂತನವಾಗಿ ಪ್ರಾರಂಭಿಸಿರುವ ಎಲ್.ಕೆ .ಜಿ ಆಂಗ್ಲ ಮಾಧ್ಯಮ ಕ್ಲಾಸ್ ಗೆ ಚಾಲನೆ ನೀಡಿ ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿದರು.
ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ,ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಹಾಗಾಗಿ ಮಕ್ಕಳು ಸರ್ಕಾರದ ಸವಲತ್ತು ಪಡೆದು ಮುಂದೆ ಚೆನ್ನಾಗಿ ಓದಿ ಹೆಚ್ಚು ಹೆಚ್ಚು ಅಂಕ ಪಡೆದು ತಮ್ಮ ಭವಿಷ್ಯದಲ್ಲಿ ತಾವು ಕಟ್ಟಿಕೊಂಡಿರುವ ಕನಸು ನನಸು ಮಾಡಿಕೊಳ್ಳಬೇಕು ಎಂದು ಶಾಲಾ ಮಕ್ಕಳಿಗೆ ಕಿವಿ ಮಾತು ಹೇಳಿದರು. ನಂತರ ನೂತನವಾಗಿ ಶಾಲೆಗೆ ಸೇರಿದ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ಹಂಚಿದರು.
ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ತಹಶೀಲ್ದಾರ್ ವೈ ಕೆ ಗುರುಪ್ರಸಾದ್, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಅಂಬಿಕಾ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮ್ತಾಜ್ ಬಾನು, ಸದಸ್ಯರುಗಳಾದ ಮಂಜುಳಾ ಸತೀಶ್, ಸಂಪತ್ ಕುಮಾರ್, ಚಾಮುಲ್ ನಿರ್ದೇಶಕರಾದ ಪ್ರಸಾದ್, ಜೆಡಿಎಸ್ ಮುಖಂಡರುಗಳಾದ ಅಮೀನ್, ಚಿನ್ನವೆಂಕಟ ,ಮಂಜೇಶ ಸೇರಿದಂತೆ ಶಿಕ್ಷಕರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್
