ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅಂಕನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಕೊಟ್ಟಿಗೆ ಗೋಡೆ ಕುಸಿದು ಮೂರು ಹಸುಗಳು ಮೃತಪಟ್ಟಿರುವ ಘಟನೆ ಜರುಗಿದೆ.
ಪಿರಿಯಾಪಟ್ಟಣ ತಾಲೂಕಿನ ಅಂಕನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಸ್ತಾಕ್ ಅಹಮದ್ ಎಂಬವರಿಗೆ ಸೇರಿದ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿತ್ತು, ಮೂರು ಹಸುಗಳು ಗೋಡೆ ಕುಸಿತಗೊಂಡ ಪರಿಣಾಮ ಕೊಟ್ಟಿಗೆಯ ಮೇಲ್ಚಾವಣಿಯು ಮೇಲೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿವೆ.
ಪಿರಿಯಾಪಟ್ಟಣ ತಾಲೂಕಿನ ಅತ್ಯಂತ ನಿರಂತರವಾಗಿ ಸುಳಿಯುತ್ತಿರುವ ಮಳೆಗೆ ಅನೇಕ ಅವಘಡಗಳು ಸಂಭವಿಸುತ್ತಿದ್ದು ಜಮೀನಿನಲ್ಲಿ ನೀರು ನಿಂತು ಬೆಳೆಗಳಿಗೆ ಹಾನಿಯಾದರೆ, ಆಟೋ ಮೇಲೆ ಮರದ ಕೊಂಬೆ ಬಿದ್ದು ಆಟೋ ಚಾಲಕನಿಗೆ ತೊಂದರೆಯಿಡಾಗಿದ್ದು ಇದೀಗ ಎರಡನೇ ಪ್ರಕರಣವಾಗಿದ್ದು ಬಡ ರೈತರ ಹಸುಗಳು ಸಾವನಪ್ಪಿದೆ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮಾಜಿ ಮೈಮುಲ್ ಅಧ್ಯಕ್ಷ ಪಿಎಂ ಪ್ರಸನ್ನ ಆಗ್ರಹಿಸಿದ್ದಾರೆ.
