ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಿಇಒ ಜಿ.ಎನ್.ರಾಜು ಅವರಿಗೆ ಶಿಕ್ಷಕ ಸಮುದಾಯದಿಂದ ಆತ್ಮೀಯ ಬೀಳ್ಕೊಡುಗೆ

ಪ್ರಾಮಾಣಿಕ ಸೇವೆಯಿಂದಲೇ ಅಧಿಕಾರಿಗಳು ಶಾಶ್ವತವಾಗಿ ಜನಮಾನಸದಲ್ಲಿ ಉಳಿಯುತ್ತಾರೆ : ಬಿಇಓ ಜಿ.ಎನ್ ರಾಜು

ರಾಯಚೂರು/ ಸಿಂಧನೂರು :ಯಾವುದೇ ಅಧಿಕಾರಿಗಳು ತಮ್ಮ ವೃತ್ತಿ ಜೀವನದಲ್ಲಿ ಪ್ರಾಮಾಣಿಕ ಹಾಗೂ ಸಿಬ್ಬಂದಿಯ ಸಹಕಾರದೊಂದಿಗೆ ಕೆಲಸ ನಿರ್ವಹಿಸಿದಾಗ ಶಾಶ್ವತವಾಗಿ ಜನರ ಮನಸ್ಸಿನಲ್ಲಿ ಉಳಿಯುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್. ರಾಜು ಹೇಳಿದರು.
ಅವರು ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ತಾಲೂಕಿನ ಸಮಸ್ತ ಶಿಕ್ಷಕ ವೃಂದದ ವತಿಯಿಂದ ಗೌರವಪೂರ್ಣ ಹಾಗೂ ಆತ್ಮೀಯ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಾ, ಕಲ್ಯಾಣ ಕರ್ನಾಟಕದಲ್ಲಿ ಸೇವೆ ಸಲ್ಲಿಸುವುದು ಒಂದು ಭಾಗ್ಯ ಎಂದು ಭಾವಿಸಿ ನಾನು ಈ ತಾಲೂಕನ್ನು ಆಯ್ಕೆ ಮಾಡಿಕೊಂಡೆ. ತಾಲೂಕಿನ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಹಾಗೂ ಶಿಕ್ಷಕರ ಸಂಘಟನೆಗಳ ಸಹಕಾರದೊಂದಿಗೆ ಕೇವಲ ಕೆಲವೇ ತಿಂಗಳುಗಳ ಕಾಲ ಯಶಸ್ವಿ ಸೇವೆಯನ್ನು ಮುಗಿಸಿದ್ದೇನೆ. ಈ ಕಚೇರಿಯಲ್ಲಿ ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ. ಎಷ್ಟೋ ಜನ ಕೈಗೆ ಹಣ ನೀಡಲು ಬಂದರು. ನಾನು ಇಲ್ಲಿವರೆಗೂ ನನ್ನ ಕೈಯನ್ನು ಹೊಲಸು ಮಾಡಿಕೊಂಡಿಲ್ಲ ದಯವಿಟ್ಟು ನಿಮ್ಮ ಹಣವನ್ನು ತೆಗೆದುಕೊಳ್ಳಿ ಎಂದು ಹೇಳಿದಾಗ ಅವರು ಆಶ್ಚರ್ಯಕರ ಮಾತುಗಳನ್ನು ಆಡುತ್ತಾ, ನಿಮ್ಮಂತ ಅಧಿಕಾರಿಗಳು ತಾಲೂಕಿನಲ್ಲಿ ಸೇವೆ ಸಲ್ಲಿಸಲಿ ಎಂದು ಕೆಲವೊಬ್ಬರು ಹೇಳಿದ ಮಾತುಗಳನ್ನು ಹಂಚಿಕೊಂಡರು. ಅಧಿಕಾರಿಗಳಾದವರು ಪ್ರತಿಯೊಂದು ಕ್ಷಣದಲ್ಲೂ ವಿವೇಚನೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಒಂದು ಕ್ಷಣವೂ ಮೈ ಮರೆಯಬಾರದು. ಇದರಿಂದ ನಮ್ಮ ಸೇವೆಯಲ್ಲಿ ಸಂತೃಪ್ತಿ ಸಿಗುತ್ತದೆ. ಮೂಲಕ ಶಿಕ್ಷಕ ಸಮುದಾಯದಲ್ಲಿ ಅಜರಾಮರವಾಗಿ ಇರಲು ಸಾಧ್ಯವಾಗುತ್ತದೆ. ನಾವು ಎಲ್ಲಿಗೆ ಇದ್ದರೂ ಪರವಾಗಿಲ್ಲ ನಮ್ಮ ಹೆಜ್ಜೆಗಳನ್ನು ಬಿಟ್ಟು ಹೋಗಬೇಕು. ಶಿಕ್ಷಕರು ತಮ್ಮಲ್ಲಿರುವ ಪ್ರತಿಭೆ ಹಾಗೂ ಅನುಭವಗಳಿಂದ ಮಕ್ಕಳಲ್ಲಿ ಗುಣಾತ್ಮಕ ಶಿಕ್ಷಣವನ್ನು ನೀಡಬೇಕು ಎಂದು ಕಿವಿಮಾತು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯಲ್ಲಿ 37-ವರ್ಷಗಳ ಕಾಲ ಸುದೀರ್ಘ ಸೇವೆಯನ್ನು ಸಲ್ಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಜಿಎನ್ ರಾಜು ಅವರ ಕುರಿತು ತಾಲೂಕ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಶರಣಬಸವ ಹಿರೇಮಠ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷೆ ಮಾನಮ್ಮ ನಾಯಕ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಕೆ ಮಲ್ಲಪ್ಪ, ತಾಲೂಕ ಅಕ್ಷರ ದಾಸೋಹ ನಿರ್ದೇಶಕರಾದ ಸಾಬಣ್ಣ ವಗ್ಗರ್, ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘದ ರಾಜೇಂದ್ರ ಕುಮಾರ, ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಬಸಲಿಂಗಪ್ಪ, ಮುಖ್ಯಗುರು ಚಿದಾನಂದಯ್ಯ ಗುರುವಿನ ಮಾತನಾಡಿದರು.
ಈ ಸಂದರ್ಭದಲ್ಲಿ ಜಿ ಎನ್ ರಾಜುರವರ ಪತ್ನಿ ಜಯಶ್ರೀ, ಜಿಲ್ಲಾ ಸಿ ಆರ್ ಪಿ ಬಿ ಆರ್ ಪಿ ಸಂಘದ ಜಗದೀಶ ಕಲ್ಮಂಗಿ, ತಾಲೂಕ ಸಿಆರ್‌ಪಿ ಬಿ ಆರ್ ಪಿ ಸಂಘದ ಅಧ್ಯಕ್ಷ ಬಸವರಾಜ ಅಂಗಡಿ, ತಾಲೂಕ ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕರಾದ ಸೋಮಲಿಂಗಪ್ಪ, ಬಿ ಆರ್ ಪಿ ಗಳಾದ ರವಿ ಪವಾರ್, ಮೈನುದ್ದಿನ್, ಪಂಪಾಪತಿ, ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಜಿ.ಎಸ್ ಪಾಟೀಲ್, ಚನ್ನಬಸವ, ವೀರನಗೌಡ, ರಾಮದಾಸ, ವೀರೇಶ ಗೋನವಾರ, ಗುಂಡಪ್ಪ, ಪ್ರಾಥಮಿಕ ಶಾಲಾ ಶಾಲಾ ಶಿಕ್ಷಕರ ಸಂಘದ ಅಂಬಮ್ಮ, ಪ್ರಭಾಕರ್ ಕುಲಕರ್ಣಿ, ಆದೇಶ, ಹುಸೇನ್ ಭಾಷ, ತಾಲೂಕಿನ ಸಿ.ಆರ್.ಪಿ ಗಳು , ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರು ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ