ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹನೂರಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮ

ಚಾಮರಾಜನಗರ/ ಹನೂರು: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಹಾಗೂ ಜಂಧ್ವನಿ ಬಿ. ವೆಂಕಟೇಶ್ ಅಭಿಮಾನಿ ಬಳಗದ ವತಿಯಿಂದ ಇಂದು ಉಚಿತ ಕಣ್ಣಿನ ತಪಾಸಣಾ ಶಿಬಿರ, ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನ ಧ್ವನಿ ಬಿ ವೆಂಕಟೇಶ್ ರವರು ಕಳೆದ 8 ವರ್ಷಗಳಿಂದ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಉಚಿತ ಆರೋಗ್ಯ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರಗಳನ್ನು ನಿರಂತರವಾಗಿ ಆಯೋಜಿಸುತ್ತಾ ಬಂದಿರುವುದರಿಂದ ಹನೂರು ಕ್ಷೇತ್ರದ ಜನತೆಗೆ ಅನುಕೂಲವಾಗಿದೆ. ಅಪರೇಷನ್ ಮಾಡಲು ಸಾಧ್ಯವಿಲ್ಲದೆ ಪರಿತಪಿಸುತ್ತಿದ್ದ ಹಿರಿಯ ಜೀವಗಳು ಕಣ್ಣಿನ ಆಪರೇಷನ್ ಮಾಡಿಸಿಕೊಂಡು ಇನ್ನಷ್ಟು ಕಾಲ ಬಾಳಿ ಬದುಕಲು ನೆರವಾಗಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಲೋಕೇಶ್ ಜತ್ತಿ ಮಾತನಾಡಿ ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನ ಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ 73 ನೇ ಕ್ಯಾಂಪನ್ನು ಯಶಸ್ವಿಯಾಗಿ ಮುಗಿಸಿದ್ದೇವೆ. ಕಳೆದ 8 ವರ್ಷಗಳಿಂದಲೂ ಸಹ ವೆಂಕಟೇಶ್ ರವರು ಹನೂರು ಕ್ಷೇತ್ರದ ಜನತೆಗೆ ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದ್ದಾರೆ.

ಪ್ರತಿಯೊಬ್ಬ ಮನುಷ್ಯನಿಗೂ ಕಣ್ಣು ಪ್ರಮುಖ ಅಂಗ

ಇದೇ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಣ್ಣಿನ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು ಎಂದರು.

ಇದುವರೆಗೂ ನಡೆದಿರುವ 73 ಕ್ಯಾಪ್ ಗಳಲ್ಲಿ ಸುಮಾರು 5,000 ಜನರಿಗೆ ಉಚಿತ ಕಣ್ಣಿನ ಆಪರೇಷನ್ ಮಾಡಿಸಲಾಗಿದೆ. ಇದಲ್ಲದೆ 7 ಸಾವಿರಕ್ಕೂ ಹೆಚ್ಚು ಜನರಿಗೆ ಉಚಿತ ಕನ್ನಡಕ ವಿತರಿಸಲಾಗಿದೆ. ಕಷ್ಟ ಎಂದು ಬಂದವರಿಗೆ ಮಾತೃ ಹೃದಯದಿಂದ ಸ್ಪಂದಿಸುತ್ತಿದ್ದಾರೆ ಎಂದರು.

ತಪಾಸಣಾ ಶಿಬಿರಕ್ಕೆ ಹನೂರು ಪಟ್ಟಣ ಸೇರಿದಂತೆ ಆರ್ ಎಸ್ ದೊಡ್ಡಿ. ಬೆಳತ್ತೂರು, ಉದ್ದನೂರು. ಲೊಕ್ಕನಹಳ್ಳಿ,ಮಂಗಲ, ಮಣಗಳ್ಳಿ ಬಂಡಳ್ಳಿ ಶಾಗ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ಭಾಗವಹಿಸಿದ್ದರು. ಇದೇ ವೇಳೆ ಜನಧ್ವನಿ ಬಿ ವೆಂಕಟೇಶ್ ಕಚೇರಿ ಸಿಬ್ಬಂದಿಗಳು ಹಾಗೂ ಬಿಜೆಪಿ ಯುವ ಮುಖಂಡರು ಹಾಜರಿದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ