ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಬಿಇಒ ಕಚೇರಿ ಆರಂಭಿಸಲು ಆಗ್ರಹಿಸಿ ಮನವಿ ಸಲ್ಲಿಕೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆರಂಭಿಸುವಂತೆ ಒತ್ತಾಯಿಸಿ ಇಲ್ಲಿಯ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಘಟಕದ ಪದಾಧಿಕಾರಿಗಳು ಶಾಸಕ ಜೆ.ಎನ್. ಗಣೇಶ ಅವರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು.
ಬಳಿಕ ಸಂಘದ ತಾಲೂಕು ಘಟಕದ ಅಧ್ಯಕ್ಷ ಹೆಚ್. ದೊಡ್ಡಬಸಪ್ಪ ಮಾತನಾಡಿ ಕಂಪ್ಲಿಯಲ್ಲಿ ಬಿಇಓ ಕಚೇರಿ ಆರಂಭಕ್ಕೆ ಸಂಬಂಧಪಟ್ಟಂತೆ ಕಲಬುರ್ಗಿಯ ಶಾಲಾ ಶಿಕ್ಷಣ ಇಲಾಖೆ ವಿಭಾಗದ ಹೆಚ್ಚುವರಿ ಆಯುಕ್ತರು 2025ರ ಏಪ್ರಿಲ್ 23ರಂದು ಸುತ್ತೋಲೆ ಹೊರಡಿಸಿ ಬಿಇಒ ಕಚೇರಿ ಆರಂಭಿಸುವಂತೆ ಸೂಚಿಸಿದ್ದರು, ಆದರೆ ಕುರುಗೋಡು ಪಟ್ಟಣದಲ್ಲಿರುವ ಪಶ್ಚಿಮ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಕಂಪ್ಲಿ ಸೇರ್ಪಡೆಗೊಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕಂಪ್ಲಿ ಬಿಇಒ ಕಛೇರಿಯಿಂದ ವಂಚಿತವಾಗಿದ್ದು 30 ಕಿಲೋಮೀಟರ್ ದೂರದ ಕುರುಗೋಡಿಗೆ ಅಲೆಯಬೇಕಾದ ಅನಿರ್ವಾರ್ಯತೆ ಎದುರಾಗಿದೆ ಎಂದರು.
ಬಿಇಓ ಕಚೇರಿ ಆರಂಭದಿಂದ ಜನರಿಗೆ ಮತ್ತು ಎಸ್ಎಸ್ಎಲ್ ಸಿ ಫಲಿತಾಂಶ ಸುಧಾರಣೆಗೆ ಅನುಕೂಲವಾಗಲಿದೆ ಸರ್ಕಾರ ಪಟ್ಟಣದಲ್ಲಿ ಆರಂಭಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಸರ್ವೇಶ್, ಲಕ್ಷ್ಮಣ ನಾಯಕ್, ಟಿ. ಎಂ. ಬಸವರಾಜ, ಪ್ರಥಮಿಕ ಶಿಕ್ಷಕ ಸಂಘದ ತಾಲೂಕು ಘಟಕದ ಅಧ್ಯಕ್ಷ ಹನುಮಂತಪ್ಪ, ಪದಾಧಿಕಾರಿ ಸುನಿತಾ ಪೂಜಾರಿ, ಜಿಪಿಟಿ ಅಧ್ಯಕ್ಷ ಮಂಜುನಾಥ, ಇಸಿಓ ರೇವಣ್ಣ, ಅನುದಾನಿತ ರಾಜ್ಯ ಸಂಘಟನಾ ಕಾರ್ಯದರ್ಶಿ ಅಂಬಿಗರ ಮಂಜುನಾಥ, ಶಿಕ್ಷಕರಾದ ಚಂದ್ರಶೇಖರ, ವಿ. ವಸಂತ ಕುಮಾರ, ಮರಿಸ್ವಾಮಿ, ಮಲ್ಲಿಕಾರ್ಜುನ, ರಮೇಶ್ ಸುಗ್ಗೇನಹಳ್ಳಿ, ರವಿ, ವೀರೇಶ ಸೇರಿದಂತೆ ಇತರರು ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ