ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಮೀನಗಡ ಪ್ರಾಥಮಿಕ ಶಾಲೆ ನಂ.೨ ರ ಪ್ರಾರಂಭೋತ್ಸವ

ಬಾಗಲಕೋಟೆ : ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಜೊತೆಗೆ ವ್ಯಕ್ತಿತ್ವ ವಿಕಸನವಾಗಿ ಮಗುವಿ‌ನ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಪಟ್ಟಣ ಪಂಚಾಯತ ಸದಸ್ಯ ರಮೇಶ ಮುರಾಳ ಹೇಳಿದರು.
ಜಿಲ್ಲೆಯ ಹುನಗುಂದ ತಾಲೂಕಿನ ಅಮಿನಗಡ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2 ಶಾಲೆಯಲ್ಲಿ ನಡೆದ 2025-26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಪಠ್ಯಪುಸ್ತಕ ವಿತರಿಸಿ ಮಾತನಾಡಿದ ಅವರು ಸರ್ಕಾರ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಶೂ, ಸಾಕ್ಸ್ , ಮೊಟ್ಟೆ, ಬಾಳೆಹಣ್ಣು ಪೌಷ್ಟಿಕಾಹಾರ ನೀಡುವುದರ ಜೊತೆಗೆ ಗುಣಾತ್ಮಕ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ಸಿಗುತ್ತಿದ್ದು, ಪಾಲಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಮಹೇಶ ಸಿಂಹಾಸನ ಮಾತನಾಡಿ ಈ ಶೈಕ್ಷಣಿಕ ವರ್ಷದಲ್ಲಿ ಎಲ್.ಕೆ.ಜಿ, ಯು.ಕೆ.ಜಿ ತರಗತಿ ಆರಂಭವಾಗಿದ್ದು , ಪಿ.ಎಂ.ಶ್ರೀ ಯೋಜನೆಯಲ್ಲಿ ನಮ್ಮ ಶಾಲೆ ಆಯ್ಕೆಯಾಗಿದ್ದು , ಗುಣಾತ್ಮಕ ಶಿಕ್ಷಣದ ಜೊತೆಗೆ ಭೌತಿಕವಾಗಿ ಅಭಿವೃದ್ಧಿಯಾಗುತ್ತಿದೆ ಪಟ್ಟಣ ಜನತೆ ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.
ಸಮಾಜ ಸೇವಕ .ಡಿ.ಪಿ.ಅತ್ತಾರ, ಮಹಾಂತೇಶ ಕಲ್ಲಕುಟಗರ , ರೇಷ್ಮಾ ಬೇಪಾರಿ, ಪ್ರಕಾಶ ಐಹೊಳೆ, ಮುಖ್ಯೋಪಾಧ್ಯಾಯ ಎಂ.ಎಸ್ ಹರಗಬಲ್ಲ, ಶಿಕ್ಷಕರಾದ ಆರ್.ಎಂ.ಎಮ್ಮಿ, ಬಿ.ಬಿ.ಭಾಪ್ರಿ, ಎಸ್.ಎಸ್.ಲಮಾಣಿ, ಐ.ಬಿ.ಭಾಪುರೆ, ಮಲ್ಲಿಕಾರ್ಜುನ ಸಜ್ಜನ, ಶಾರದಾ ಕುಶಾಲಕರ ಇದ್ದರು.
ವಿದ್ಯಾರ್ಥಿಗಳಿಗೆ ಪುಷ್ಟವೃಷ್ಠಿ, ಸಿಹಿ ತಿಂಡಿ ನೀಡುವುದರ ಮೂಲಕ ಶಾಲೆಗೆ ಸ್ವಾಗತಿಸಲಾಯಿತು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ