ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರಳವಾಗಿ ಅಭಿಮಾನಿಗಳು ಮತ್ತು ಕಾರ್ಯಕರ್ತರೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಮಾಜಿ ಶಾಸಕ ಕೆ ಎಂ ತಿಮ್ಮರಾಯಪ್ಪ

ತುಮಕೂರು/ ಪಾವಗಡ : ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ ಎಂ ತಿಮ್ಮರಾಯಪ್ಪ ರವರ 65 ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿದ ಬಲ್ಲೇನಹಳ್ಳಿ ಗ್ರಾಮಸ್ಥರು ಮತ್ತು JDS ಕಾರ್ಯಕರ್ತರು ಅಂಬೇಡ್ಕರ್ ರವರ ಪುತ್ಥಳಿಗೆ ಪುಷ್ಪ ಮಾಲೆ ಹಾಕಿ ಅಂಬೇಡ್ಕರ್ ರವರಿಗೆ ಪಾದಾಭಿನಂದನೆ ಮಾಡಿ ನಂತರ ಅಭಿಮಾನಿಗಳ ಮಧ್ಯೆ ಕೇಕ್ ಕತ್ತರಿಸುವ ಮೂಲಕ ತಮ್ಮ 65ನೇ ಹುಟ್ಟು ಹಬ್ಬವನ್ನು ಅಭಿಮಾನಿಗಳ ಅಸೆಯಂತೆ ಸರಳವಾಗಿ ಅಚರಿಸಿದರು.
ನಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸೇರಿ ತಿಮ್ಮರಾಯಪ್ಪ ರವರಿಗೆ ಪೇಟಾ ಮತ್ತು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.
ನಂತರ ತಿಮ್ಮರಾಯಪ್ಪ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು ತಿಳಿಸುತ್ತಾ ಈ ಬಿ ಹೊಸಹಳ್ಳಿ ಮಲ್ಲಿಕಾರ್ಜುನ ರವರು ತಿಮ್ಮರಾಯಪ್ಪ ರವರ ಅಧಿಕಾರದ ಅವಧಿಯಲ್ಲಿ ನಡೆದಂತ ಮತ್ತು ಅವರ ಪ್ರಯತ್ನದಿಂದ SCP ಮತ್ತುTSP ಯೋಜನೆಯ ಜಾರಿಗೆ ಬರುವುದರಲ್ಲಿ ಪ್ರಮುಖರು ಅದೇ ರೀತಿಯಲ್ಲಿ ಪಾವಗಡ ತಾಲೂಕನ್ನು ಗುಡಿಸಲು ರಹಿತ ಯೋಜನೆ ತಾಲೂಕಿಗೆ ಗುಡಿಸಲು ರಹಿತ ಮನೆಗಳು ಬರುವಂತೆ ಶ್ರಮಿಸಿದರು ಹಾಗೆಯೇ 8 ಮೊರಾರ್ಜಿ ಮತ್ತು ವಾಜಪೇಯಿ ವಸತಿ ಶಾಲೆಗಳನ್ನು ತಂದಿರುವಂತ ಧೀಮಂತ ನಾಯಕರು ನಮ್ಮ ಕೆ. ಎಂ. ತಿಮ್ಮರಾಯಪ್ಪ ರವರು ಎಂದು ಅವರ ಅಧಿಕಾರ ಅವಧಿಯಲ್ಲಿ ನಡೆದಂತ ಅಭಿವೃದ್ಧಿ ಬಗ್ಗೆ ವಿವರಿಸಿ ಈ ಕಾರ್ಯಕ್ರಮದಲ್ಲಿ ದಲಿತ ಮುಖಂಡರಾದ ಗೋಪಾಲ್, ಚನ್ನಕೇಶವ ,ರಾಮಾಂಜಿ ಮಲ್ಲೇಶ , ಅಶೋಕ್, ನಾಗರಾಜಪ್ಪ, ರಾಮಣ್ಣ ಹಾಗೂಬಲ್ಲೇನಹಳ್ಳಿ ಗ್ರಾಮಸ್ಥರು ಹಾಗೂ JDS ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪೃಥ್ವಿರಾಜು ಜಿ. ವಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ