
ಬೆಂಗಳೂರು/ ನೆಲಮಂಗಲ: ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿಯ ಟೋಲ್ ಗೇಟ್ (ಜಾಸ್ ಟೋಲ್) ಬಳಿ ನೆಡೆದಿದೆ.
ಮೂಲತಃ ಬೆಳಗಾವಿ ಜಿಲ್ಲೆಯವರಾದ ಶಶಿಧರ್ (66) ಮೃತಪಟ್ಟ ವ್ಯಕ್ತಿಯಾಗಿದ್ದು, ಇತ್ತೀಚೆಗೆ ಟಿ.ಬೇಗೂರು ಗ್ರಾಮದಲ್ಲಿ ವಾಸವಿದ್ದರು. ಶಶಿಧರ್ ಅವರು ನೆಲಮಂಗಲ ನಗರದಿಂದ ಬಿಎಂಟಿಸಿ ಬಸ್ನಲ್ಲಿ ಟಿ. ಬೇಗೂರು ಗ್ರಾಮದಲ್ಲಿರುವ ತಮ್ಮ ಮನೆಗೆ ಪ್ರಯಾಣಿಸುತ್ತಿದ್ದ ವೇಳೆ, ಮಾರ್ಗ ಮಧ್ಯದ ಟೋಲ್ಗೇಟ್ ಬಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಕಳಿಸಲಾಗಿದ್ದು, ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಕರುನಾಡ ಕಂದ
