ಚಾಮರಾಜನಗರ/ ಹನೂರು: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು
ಸೇನೆಯ ಸಾಮೂಹಿಕ ನಾಯಕತ್ವದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ವಿರುದ್ಧ ದೂರು ದಾಖಲಿಸಿರುವುದನ್ನು ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ವೈ ಕೆ ಗುರುಪ್ರಸಾದ್ ರವರಿಗೆ ಮನವಿ ಸಲ್ಲಿಸಲಾಯಿತು. ಹನೂರು ಪಟ್ಟಣದ ತಾಲೂಕು ಕಚೇರಿಗೆ ತೆರಳಿದ ಈ ರೈತ ಸಂಘದ ಕಾರ್ಯಕರ್ತರು ತಹಸೀಲ್ದಾರ್ ವೈಕೆ ಗುರುಪ್ರಸಾದ್ ಅವರ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು. ಚಾಮುಲ್ನಲ್ಲಿ – ಐಸ್ಕ್ರೀಂ ಘಟಕ ನಿರ್ಮಾಣ ಖಂಡಿಸಿ ಇತ್ತೀಚೆಗೆ ರೈತ ಸಂಘಟನೆಗಳು ಹಾಗೂ ಹಾಲು ಉತ್ಪಾದಕ ಸಹಕಾರ ಸಂಘಗಳ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ – ವಿರುದ್ಧ ಹೊನ್ನೂರು ಪ್ರಕಾಶ್ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿರುವುದು ಖಂಡನೀಯ ಎಂದರು. ಹೊನ್ನೂರು ಪ್ರಕಾಶ್ ಅವರು ಮುಖ್ಯಮಂತ್ರಿಗಳ ವಿರುದ್ಧ ಯಾವುದೇ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಆದರೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಚಾಮುಲ್ ಅನ್ನು ರಕ್ಷಣೆ ಮಾಡಿಕೊಳ್ಳಲು ಹಾಗೂ ರೈತಸಂಘದ ಚಳವಳಿಯನ್ನು ಹತ್ತಿಕ್ಕಲು ಸುಳ್ಳು ದೂರನ್ನು ದಾಖಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಹನೂರು ತಾಲೂಕು ಘಟಕದ ಅಧ್ಯಕ್ಷ ಚೆಂಗಡಿ ಕರಿಯಪ್ಪ, ಮಾದಪ್ಪ, ಶಾಂತಕುಮಾರ್, ವಿನೇಶ್, ಅಮೋಘ ರಾವ್ ಶ್ರೀನಿವಾಸ್ ನಂದೀಶ್, ಉಮೇಶ್, ಕೃಷ್ಣಪ್ಪ, ಶಿವಕುಮಾರ್, ಪ್ರದೀಪ್ ಕುಮಾರ್, ಶಿವಪ್ಪ ,ಮಹೇಶ್, ಶಿವಮಲ್ಲಪ್ಪ, ಪ್ರಕಾಶ್ ಕೃಷ್ಣಪ್ಪ ವೇಣುಗೋಪಾಲ್, ಕುಮಾರ್ ರುದ್ರಸ್ವಾಮಿ, ನಾರಾಯಣ, ಪ್ರಕಾಶ್, ರಮೇಶ್, ಪ್ರದೀಪ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ ಉಸ್ಮಾನ್ ಖಾನ್
