ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಸಿರಿ ಪೌಂಡೇಷನ್ ವತಿಯಿಂದ ಉಚಿತವಾಗಿ 5 ಸಾವಿರ ಸಸಿಗಳ ವಿತರಣೆ : ಚನ್ನಪ್ಪ ಕೆ. ಹೊಸಹಳ್ಳಿ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಪಿ. ಡಬ್ಲ್ಯೂ. ಡಿ ಕ್ಯಾಂಪ್ ನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಾಲಯ ಹತ್ತಿರ ಸರಕಾರಿ ಶಾಲೆಗಳನ್ನು ಹಸಿರುಕರಣಗೊಳಿಸಲು ವನಸಿರಿ ಫೌಂಡೇಶನ್ ನಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 5 ಸಾವಿರ ಸಸಿಗಳ ವಿತರಣೆ ಕಾರ್ಯಕ್ರಮವನ್ನು ಇದೇ ಜೂನ್ 4 ರಂದು ಹಮ್ಮಿಕೊಳ್ಳಲಾಗಿದೆ ಎಂದು ವನಸಿರಿ ಫೌಂಡೇಶನ್ ಸದಸ್ಯ ಚನ್ನಪ್ಪ ಕೆ ಹೊಸಹಳ್ಳಿ ಅವರು ತಿಳಿಸಿದರು.

ಸಿಂಧನೂರು ನಗರದ ವನಸಿರಿ ಫೌಂಡೇಶನ್ ಕಾರ್ಯಾಲಯದಲ್ಲಿ ಮಾತನಾಡಿದ ಪರಿಸರ ಪ್ರೇಮಿ, ವನಸಿರಿ ಫೌಂಡೇಶನ್ ಸದಸ್ಯ ಚನ್ನಪ್ಪ ಕೆ. ಹೊಸಹಳ್ಳಿ ಅವರು ಹಲವಾರು ವರ್ಷಗಳಿಂದ ಸರಕಾರಿ ಶಾಲೆಗಳ ಹಸಿರುಕರಣ ಮಾಡಲು ವನಸಿರಿ ಫೌಂಡೇಷನ್ ತಂಡ ಶ್ರಮಿಸುತ್ತಿದೆ.

ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಬಿಸಿಲಿನ ತಾಪಮಾನ ಹೊಂದಿದ್ದು, ಇದನ್ನು ತಗ್ಗಿಸುವ ಸಲುವಾಗಿ ಪ್ರತಿ ವರ್ಷ ಸುಮಾರು 1 ಲಕ್ಷ ಗಿಡಗಳನ್ನು ನೆಡುವ ಗುರಿಯನ್ನು ಹೊಂದಲಾಗಿದೆ. ಅದರಲ್ಲೂ ಸರಕಾರಿ ಶಾಲೆಗಳನ್ನೇ ಹಸಿರುಕರಣ ಮಾಡಲು ಮೊದಲ ಆದ್ಯತೆ ನೀಡುತ್ತಿದ್ದೇವೆ. ಇದೇ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎಲ್ಲಾ ಸರಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಗಿಡಮರಗಳನ್ನು ಬೆಳಸಬೇಕು ಎಂಬ ಸದುದ್ದೇಶದಿಂದ ನಮ್ಮ ವನಸಿರಿ ತಂಡದಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ 5 ಸಾವಿರ ಸಸಿಗಳನ್ನು ಸರಕಾರಿ ಶಾಲೆಗಳಲ್ಲೇ ನೆಡಬೇಕೆಂಬುದು ನಮ್ಮ ದ್ವೇಯವಾಗಿದೆ. ಇದೇ ಜೂನ್ 4 ರಂದು ಸಿಂಧನೂರು ನಗರದ PWD ಕ್ಯಾಂಪ್ ನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಾಲಯದ ಹತ್ತಿರ 5 ಸಾವಿರ ಸಸಿಗಳನ್ನು ಉಚಿತವಾಗಿ ನೀಡುತ್ತಿದ್ದೇವೆ ಎಲ್ಲಾ ಸರಕಾರಿ ಶಾಲೆಗಳ ಶಿಕ್ಷಕರು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ