ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿವೃತ್ತ ಕೃಷಿ ಅಧಿಕಾರಿ ಬೀಳಗಿಯವರ ಬೀಳ್ಕೊಡುವ ಸಮಾರಂಭ

ವಿಜಯಪುರ/ ತಾಳಿಕೋಟೆ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಎಮ್.ಎಚ್. ಬೀಳಗಿ ಇವರನ್ನು ಇಲಾಖೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಅರವಿಂದ ಹೂಗಾರ ಅವರು ಮಾತನಾಡಿ ಸರ್ಕಾರಿ ನೌಕರರ ನಿವೃತ್ತಿ ಮತ್ತು ಪದೋನ್ನತಿ ಒಂದು ಸಹಜ ಪ್ರಕ್ರಿಯೆಯಾಗಿದೆ ಆದರೆ ನಾವು ನಮ್ಮ ಸೇವಾ ಅವಧಿಯಲ್ಲಿ ಎಷ್ಟು ಕರ್ತವ್ಯ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇವೆ ಎಂಬುದು ಮುಖ್ಯವಾಗುತ್ತದೆ, ಈ ಇಲಾಖೆಯಲ್ಲಿ 38 ವರ್ಷಗಳ ಸೇವೆಯನ್ನು ಸಲ್ಲಿಸಿದ ಎಂ.ಎಚ್. ಬೀಳಗಿಯವರು ಇಲಾಖೆ ಅಭಿಮಾನ ಪಡುವ ರೀತಿಯಲ್ಲಿ ಸೇವೆಯನ್ನು ಸಲ್ಲಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ ಅವರ ವಿಶ್ರಾಂತ ಬದುಕು ಸುಖಕರವಾಗಿರಲೆಂದು ಹಾರೈಸುತ್ತೇನೆ ಎಂದರು. ಇಲಾಖೆಯ ನಿವೃತ್ತ ನೌಕರ ಹೆಚ್.ವೈ.ಮಸರಕಲ್ಲ ಮಾತನಾಡಿ ಎಂ.ಎಚ್.ಬೀಳಗಿ ಅವರು ಕಡು ಬಡತನದ ಕುಟುಂಬದ ಹಿನ್ನೆಲೆಯಿಂದ ಬಂದವರು ಬಹಳ ಕಷ್ಟಪಟ್ಟು ಓದಿ ಸರ್ಕಾರಿ ನೌಕರಿಯನ್ನು ಪಡೆದು ಈ ಇಲಾಖೆಯಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದಾರೆ ಅವರ ಆದರ್ಶ ಬದುಕು ಹಾಗೂ ಸೇವಾ ನಿಷ್ಠೆ ಇಂದಿನ ಯುವಕರಿಗೆ ಮಾದರಿಯಾಗಿದೆ ಅವರ ವಿಶ್ರಾಂತ ಬದುಕು ನೆಮ್ಮದಿದಾಯಕವಾಗಿರಲೆಂದು ಹಾರೈಸುತ್ತೇನೆ ಎಂದರು.
ಸಾಮಾಜಿಕ ಕಾರ್ಯಕರ್ತ ಎಸ್.ಎ.ನಾಲಬಂದ, ನಿವೃತ್ತ ಶಿಕ್ಷಕಿ ಲಾಲಬಿ ಎಂ.ಬೀಳಗಿ, ರಾಜು ರುದ್ರವಾಡಿ, ಸಂಗಮೇಶ ಪಾಟೀಲ, ಲತೀಫ್ ಬೀಳಗಿ, ಎಂ. ಎಸ್.ಖಾಜಿ, ಎಂ.ಎಸ್.ಕೋರವಾರ, ಎನ್.ಎ.ಖಾಜಿ, ಆಸೀಫ ಬೀಳಗಿ ಮಾತನಾಡಿದರು.
ಸನ್ಮಾನ ಸ್ವೀಕರಿಸಿದ ನಿವೃತ್ತ ಕೃಷಿ ಅಧಿಕಾರಿ ಬೀಳಗಿ ಮಾತನಾಡಿ ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿಯಾಗಿರುವೆ ನನ್ನ ಸೇವೆಯ ಉದ್ದಕ್ಕೂ ಸಂಘದ ಅಧ್ಯಕ್ಷರಾದ ಅರವಿಂದ ಹೂಗಾರ ನನ್ನ ಸಹೋದ್ಯೋಗಿಗಳು ಹಾಗೂ ಒಳ್ಳೆಯ ಮಿತ್ರರ ಸಹಕಾರ ಮಾರ್ಗದರ್ಶನದಿಂದಾಗಿ ನಾನು ನನ್ನ ಸೇವೆಯನ್ನು ಪ್ರಾಮಾಣಿಕತೆಯಿಂದ ಮಾಡಲು ಸಾಧ್ಯವಾಗಿದೆ ಅವರಿಗೆ ನಾನು ಚಿರಋಣಿಯಾಗಿರುವೆ ಎಂದರು.
ಇದೇ ಸಂದರ್ಭದಲ್ಲಿ ನಿವೃತ್ತ ಕೃಷಿ ಅಧಿಕಾರಿ ಬೀಳಗಿ ಅವರಿಗೆ ಇಲಾಖೆ ವತಿಯಿಂದ ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕೃಷಿ ಅಧಿಕಾರಿ ಮಹೇಶ ಜೋಶಿ ಕಾರ್ಯಕ್ರಮ ನಿರೂಪಿಸಿದರು. ಸಂಗಮೇಶ ಪಾಟೀಲ ವಂದಿಸಿದರು. ಕಾರ್ಯಕ್ರಮದಲ್ಲಿ ಬಾಗವಾನ ಜಮಾತ್ ಅಧ್ಯಕ್ಷ ಸದ್ದಾಂ ಬೀಳಗಿ, ಕೊಹಿನೂರ ಸಂಘದ ಅಧ್ಯಕ್ಷ ಕಾಸೀಮಸಾಬ ಜಕಾತಿ,ಅಬ್ಬಾಸಲಿ ನಿಡಗುಂದಿ, ಮೈನು ಕೊರ್ತಿ, ಆದಮಸಾಬ ಡಾಲಾಯತ್, ಮೋದಿನ ಹೊನ್ನುಟಗಿ, ರಾಜಅಹ್ಮದ್ ಬೆಣ್ಣೂರ,ಮಶಾಕ್ ಮುರಾಳ ಹಾಗೂ ಇಲಾಖೆಯ ಸಿಬ್ಬಂದಿಗಳು ಇದ್ದರು.

ವರದಿ ನಜೀರ್ ಚೋರಗಸ್ತಿ, ತಾಳಿಕೋಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ