ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆಕಸ್ಮಿಕ ಬೆಂಕಿಗೆ ಮನೆಯ ಮೇಲ್ಛಾವಣಿ ಭಸ್ಮ: ಹನೂರು ತಹಶೀಲ್ದಾರ್ ಭೇಟಿ

ಚಾಮರಾಜನಗರ /ಹನೂರು: ಆಕಸ್ಮಿಕ ಬೆಂಕಿಗೆ ಮನೆಯ ಮೇಲ್ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮದಲ್ಲಿ ನಡೆದಿದೆ.

ಪಿ ಜಿ ಪಾಳ್ಯ ಗ್ರಾಮದ ಉಮಾಪತಿ ಈತನ ಸಹೋದರ ಸುರೇಶ್ ಎಂಬುವರಿಗೆ ಸೇರಿದ ಮನೆ ಇದಾಗಿದೆ. ಉಮಾಪತಿ ಬೆಂಗಳೂರಿನಲ್ಲಿ ವಾಸವಿದ್ದು ಸುರೇಶ್ ರವರು ಪಿ ಜಿ ಪಾಳ್ಯ ಗ್ರಾಮದ ಮನೆಯಲ್ಲಿ ವಾಸವಿರುತ್ತಿದ್ದರು.

ಸೋಮವಾರ ತಡರಾತ್ರಿ ಇದ್ದಕ್ಕಿದ್ದ ಹಾಗೆ ಮನೆಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ, ಬೆಂಕಿಯ ಶಾಖಕ್ಕೆ ಮನೆಯಲ್ಲಿ ಮಲಗಿದ್ದ ಸುರೇಶ್ ರವರು ತಪ್ಪಿಸಿಕೊಂಡು ಹೋಗಿದ್ದಾರೆ ಬೆಂಕಿಯ ಕೆನ್ನಾಲಿಗೆಗೆ ಮನೆಯ ಮೇಲ್ಚಾವಣಿ ಸಂಪೂರ್ಣ ಸುಟ್ಟುಹೋಗಿದೆ ಸ್ಥಳೀಯರ ನೆರವಿನಿಂದ ಬೆಂಕಿಯನ್ನು ನಂದಿಸಿದ್ದಾರೆ.

ತಹಶೀಲ್ದಾರ್ ಭೇಟಿ:
ಪಿ.ಜಿ. ಪಾಳ್ಯ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಆಕಸ್ಮಿಕ ಬೆಂಕಿಗೆ ಮನೆಯ ಮೇಲ್ಚಾವಣಿ ಸುಟ್ಟು ಹೋಗಿರುವ ಬಗ್ಗೆ ಸುರೇಶ್ ರವರು ದೂರವಾಣಿ ಮುಖಾಂತರ ತಹಸಿಲ್ದಾರ್ ವೈಕೆ ಗುರುಪ್ರಸಾದ್ ರವರಿಗೆ ಮಾಹಿತಿ ನೀಡಿದ ಹಿನ್ನೆಲೆ ಮಂಗಳವಾರ ಮಧ್ಯಾಹ್ನ ತಹಸಿಲ್ದಾರ್ ವೈ ಕೆ ಗುರುಪ್ರಸಾದ್ ಹಾಗೂ ಲೊಕ್ಕನಹಳ್ಳಿ ಕಂದಾಯ ನಿರೀಕ್ಷಕ ಮಹದೇವಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ತಹಶೀಲ್ದಾರ್ ವೈ ಕೆ ಗುರುಪ್ರಸಾದ್ ಮಾತನಾಡಿ ಮನೆಗೆ ಸಂಬಂಧಿಸಿದಂತೆ ಸಮರ್ಪಕ ದಾಖಲಾತಿಗಳನ್ನು ಚೆಸ್ಕಾಂ ಅಧಿಕಾರಗಳ ಮುಖಾಂತರ ನೀಡಿದರೆ ಪ್ರಕೃತಿ ವಿಕೋಪದಡಿ ನೀಡಲಾಗುವ ಪರಿಹಾರದ ಹಣವನ್ನು ಆದಷ್ಟು ಬೇಗ ಒದಗಿಸುವ ಕೊಡುವುದಾಗಿ ಭರವಸೆ ನೀಡಿದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ