ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಳ್ಳಾರಿ : ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಬೃಹತ್ ಪ್ರತಿಭಟನೆ

ಬಳ್ಳಾರಿ : ಕನ್ನಡ ಭಾಷೆಯನ್ನು ತಮಿಳು ಭಾಷೆಯಿಂದ ಹುಟ್ಟಿದ್ದು ಎಂಬ ದುರಹಂಕಾರ ಹೇಳಿಕೆಯನ್ನು ನಟ ಕಮಲ್ ಹಾಸನ್ ಹೇಳಿರುವುದನ್ನು ಸಮಸ್ತ ಏಳು ಕೋಟಿ ಕನ್ನಡಿಗರು ಖಂಡಿಸಿದ್ದಾರೆ.
ಅದರಂತೆ ಇಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಪುಟ್ಬಾಲ್ ಕ್ರೀಡಾಂಗಣದಿಂದ ರಾಯಲ್ ವೃತ್ತದಲ್ಲಿ ಸೇರಿ ಕಮಲ್ ಹಾಸನ್ ಭಾವಚಿತ್ರವನ್ನು ಹರಿದು ಬೆಂಕಿ ಹಚ್ಚಿ ಅವರ ವಿರುದ್ಧ ಧಿಕ್ಕಾರವನ್ನು ಕೂಗಿ ಪ್ರತಿಭಟಿಸಲಾಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಂಘಟನೆಯ ಜಿಲ್ಲಾಧ್ಯಕ್ಷ ಎಚ್. ಹುಲುಗಪ್ಪ ಮಾತನಾಡಿ ಸುಮಾರು 2,000 ವರ್ಷಗಳ ಇತಿಹಾಸ ಇರುವಂತಹ ಕನ್ನಡ ಭಾಷೆಯನ್ನು ತಮಿಳು ಭಾಷೆಯಿಂದ ಹುಟ್ಟಿದ್ದು ಎಂಬ ದುರಹಂಕಾರ ಹೇಳಿಕೆಯನ್ನು ನಟ ಕಮಲ್ ಹಾಸನ್ ಹೇಳಿರುವುದನ್ನು ಸಮಸ್ತ ಏಳು ಕೋಟಿ ಕನ್ನಡಿಗರು ಖಂಡಿಸಿದ್ದು ಕನ್ನಡದ ಎಂಟು ಸಾಹಿತಿಗಳಿಗೆ ಜ್ಞಾನಪೀಠ ಪ್ರಶಸ್ತಿ ಬಂದಿರುವುದು, ಇಮ್ಮಡಿ ಪುಲಕೇಶಿ, ಅಮೋಘವರ್ಷ, ಕೃಷ್ಣದೇವರಾಯ ಎಂಬ ಅತಿರಥ ಮಹಾರಾಜರು ಇಡೀ ನಮ್ಮ ಕನ್ನಡನಾಡನ್ನಲ್ಲದೆ ಇಡೀ ದೇಶವನ್ನು ಆಳಿದಂತಹ ಇತಿಹಾಸವಿರುವ ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿರುವುದು ಎಂಬ ಹೇಳಿರುವುದು ದುರಹಂಕಾರದ ಪರಮಾವಧಿ ಮಾತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಸಂಚಾಲಕ ಹಾಗೂ ಕಂಪ್ಲಿ ತಾಲೂಕು ಅಧ್ಯಕ್ಷ ಬಿ. ರಮೇಶ ಮಾತನಾಡಿ ತಮಿಳು ನಟ ಕಮಲಹಾಸನ್ ಕ್ಷಮೆ ಕೇಳುವವರೆಗೂ ಅವರು ಅಭಿನಯಿಸುವ ಯಾವುದೇ ಚಿತ್ರವೂ ಕರ್ನಾಟಕದಲ್ಲಿ ಬಿಡುಗಡೆಯಾಗಬಾರದು ಮತ್ತು ಅವರು ಯಾವುದೇ ಕಾರಣಕ್ಕೂ ಕರ್ನಾಟಕಕ್ಕೆ ಕಾಲಿಡದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾನೂನು ಕ್ರಮ ತೆಗೆದು ಕೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ
ಆದ್ದಿಗೇರೆ ರಾಮಣ್ಣ, ಜಿಲ್ಲಾ ಸಂಚಾಲಕ ದುರ್ಗಾ ಪ್ರಸಾದ ಕುರುಗೋಡು ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು ಹಾಗೂ ವಿವಿಧ ತಾಲೂಕಿನ ಪದಾಧಿಕಾರಿಗಳು ಕನ್ನಡ ಅಭಿಮಾನಿಗಳು ಭಾಗವಹಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ