ಕಲಬುರಗಿ: ಈ ಸಲ ಕಪ್ ನಮ್ಮದೇ ಎಂಬ ನೀರಿಕ್ಷೆ ಆರಂಭದಿದಂಲೂ ಇತ್ತು, ಕಪ್ ನಮ್ಮದೇ ಆಗಿದ್ದು ಖುಷಿ ಕೊಟ್ಟಿದೆ. ಆರ್.ಸಿ.ಬಿ ತಂಡದ ಎಲ್ಲಾ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದು ಖುಷಿ ತಂದಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು,
ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್ಸಿಬಿಯ ಹುಡುಗರು ನನಸಾಗಿಸಿದ್ದಾರೆ. ಆರ್ಸಿಬಿಯ ಈ ವಿಜಯದಲ್ಲಿ ವಿರಾಟ್ ಕೊಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ದತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎಂದರು.
ಕೋಟ್ಯಾಂತರ ಆರ್.ಸಿ.ಬಿ ಅಭಿಮಾನಿಗಳ ಕನಸು ಬಹುದಿನಗಳ ನಂತರ ಈಡೇರಿದೆ. ಕ್ರೀಡಾಸ್ಪೂರ್ತಿಯನ್ನು ತುಂಬಿದ ಈ ಆಟವು ಅಭಿಮಾನಿಗಳಲ್ಲಿ ಹೊಸ ಹುಮ್ಮಸ್ಸು ತುಂಬಿದೆ. ಈ ಸಲ್ ಕಪ್ ನಮ್ಮದಾಗಿದ್ದು ಖುಷಿ ತಂದಿದೆ ಎಂದು ಅವರು ಹೇಳಿದರು.
- ಕರುನಾಡ ಕಂದ
