ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವ ಪರಿಸರ ದಿನದ ವಿಶೇಷ ಮಾಹಿತಿ – ಪರಿಸರ ನಮಗೆಷ್ಟು ಮಹತ್ವದ್ದು ಗೊತ್ತಾ?

ಇಂದು ವಿಶ್ವ ಪರಿಸರ ದಿನ. ಪ್ರತಿ ವರ್ಷ ಜೂನ್‌ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ.

ವಿಶ್ವಪರಿಸರ ದಿನ..ಈ ದಿನದ ಇತಿಹಾಸ, ಆಚರಣೆ ಏಕೆ? ಏನಿದರ ಮಹತ್ವ?
ಇಲ್ಲಿದೆ ಮಾಹಿತಿ

ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಭಿಸಿದೆ ಎಂದರೆ ತಪ್ಪಾಗಲಾರದು. ಆದರೆ ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ.

ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ. ಪ್ರತಿ ವರ್ಷ 143ಕ್ಕೂ ಹೆಚ್ಚು ದೇಶಗಳು ಈ ದಿನದಲ್ಲಿ ಭಾಗಿಯಾಗುತ್ತವೆ. ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ವಿವಿಧ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಪ್ರಮುಖ ಸಂಸ್ಥೆಗಳು, ಎನ್‌ಜಿಒಗಳು, ಸಮುದಾಯಗಳು, ಸರ್ಕಾರಗಳು ವಿಶ್ವಾದ್ಯಂತ ಪರಿಸರ ದಿನವನ್ನು ವಿವಿಧ ರೀತಿಯಲ್ಲಿ ಆಚರಿಸುತ್ತವೆ.

ವಿಶ್ವ ಪರಿಸರ ದಿನ ಆಚರಣೆಯ ಏಕೆ? ಮಹತ್ವವೇನು? ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ವಿಶ್ವ ಪರಿಸರ ದಿನದ ಇತಿಹಾಸ

ವಿಶ್ವ ಪರಿಸರ ದಿನವನ್ನು 1974 ರಲ್ಲಿ ವಿಶ್ವಸಂಸ್ಥೆಯ ಅನುಮೋದನೆಯೊಂದಿಗೆ ಆರಂಭಿಸಲಾಯಿತು. ಈ ಕುರಿತು 1972 ರಲ್ಲಿಯೇ ಚರ್ಚೆಗಳು ಆರಂಭವಾಗಿತ್ತು. ಆದರೆ ಎರಡು ವರ್ಷಗಳ ಕಾಲ ಈ ಚರ್ಚೆ ನಡೆಸಿ, 1974 ಜೂನ್ 5 ರಂದು ಮೊದಲು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ಒಂದು ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ.

ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜೂನ್‌ 5 ರಂದು ಆಚರಿಸಲಾಗುತ್ತದೆ. ಜೂನ್‌ ತಿಂಗಳ 5ನೇ ತಾರೀಖಿನಿಂದ ಜೂನ್‌ 16ರ ವರೆಗೆ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ದಿನಗಳಲ್ಲಿ ಎಲ್ಲಡೆ ಮರಗಳನ್ನು ನೆಡಲಾಗುತ್ತದೆ. ಮತ್ತು ಪರಿಸರಕ್ಕೆ ಸಂಬಂಧಿಸಿದ ಅನೇಕ ಜಾಗೃತಿ ಕೆಲಸಗಳನ್ನು ಮಾಡಲಾಗುತ್ತದೆ.

ವಿಶ್ವ ಪರಿಸರ ದಿನ ಆಚರಣೆ ಏಕೆ ?

ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜೂನ್‌ 5ರಂದು ವಿಶ್ವಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ.

​ಪರಿಸರ ದಿನದ ಉದ್ದೇಶಗಳು

ಪರಿಸರಕ್ಕೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸುವುದು.

ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.

ಪರಿಸರ ಸ್ನೇಹಿ ಅಭಿವೃದ್ಧಿ ಪಡಿಸಲು ಅಭಿಯಾನ ಆರಂಭಿಸುವುದು.

ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು.

ಪರಿಸರವನ್ನು ನಾಶ ಮಾಡದಂತ ಜಾಗೃತಿ ಮೂಡಿಸುವುದು.

ಪರಿಸರ ಪ್ರತಿಯೊಂದು ಜೀವಿಗೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸುವುದು.

✍️ ಶ್ರೀ ಚನ್ನಬಸಪ್ಪ ಬಳಗಾರ,
(ಮಾಜಿ ಸೈನಿಕ) ಪೊಲೀಸ ಇಲಾಖೆ,ಉಡುಪಿ ಜಿಲ್ಲೆ ಸಶಸ್ತ್ರ ಮೀಸಲು ಪಡೆ, ಹವ್ಯಾಸಿ ಬರಹಗಾರ, ಕಾರ್ಗಿಲ್ ಯೋಧ, ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ