ಬಳ್ಳಾರಿ / ಕುರುಗೋಡು : ನಗರ ಹಾಗೂ ಸುತ್ತಮುತ್ತಲಿನ ಸಮಸ್ತ ನಾಗರಿಕರಿಗೆ
ಪಟ್ಟಣದಲ್ಲಿ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ವಾಮಿ ವಿವೇಕಾನಂದ ರಕ್ತ ಭಂಡಾರ ಹಾಗೂ ತಾಲೂಕು ಪಂಚಾಯತ್ – ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಮತ್ತು ಸಮುದಾಯ ಆರೋಗ್ಯ ಕೇಂದ್ರ ರಕ್ತ ಶೇಖರಣಾ ಘಟಕದ ಸಹಯೋಗದಲ್ಲಿ
ದಿನಾಂಕ 7.6.2025ರ ಶನಿವಾರದಂದು ಬೆಳಿಗ್ಗೆ 08:00 ಗಂಟೆಯಿಂದ ಸಂಜೆ 4:00 ವರೆಗೆ ಕುರುಗೋಡ ನ ಈದ್ಗಾ ಮೈದಾನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು ಸಮಸ್ತ ಸಾರ್ವಜನಿಕರು ಭಾಗವಹಿಸಿ ರಕ್ತದಾನ ಮಾಡಬೇಕೆಂದು ಆಯೋಜಕರು ತಿಳಿಸಿದ್ದಾರೆ.
ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಿ
ವರದಿ : ಜಿಲಾನಸಾಬ್ ಬಡಿಗೇರ್
