ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ಪರಿಸರದ ಸಮೃದ್ಧಿಯು ಆರೋಗ್ಯಕರ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ” – ಡಾ. ಮಲ್ಲಿಕಾರ್ಜುನ ಚ. ಕನಕಟ್ಟೆ ಅಭಿಮತ

ಬೀದರ್: ಹಸಿರು ಪರಿಸರ ನಿರ್ಮಾಣಕ್ಕೆ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ, ಬೀದರ್ ಹಲವಾರು ಉಪಕ್ರಮಗಳನ್ನು ಕೈಗೊಂಡಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಚ. ಕನಕಟ್ಟೆ ಅಭಿಪ್ರಾಯಪಟ್ಟರು. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ. ಕೇವಲ ಮಾನವರಿಗಷ್ಟೇ ಅಲ್ಲ ಇತರೆ ಪ್ರಾಣಿ, ಪಕ್ಷಿಗಳು ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯೆಗಳಿಗಾಗಿ ಪರಿಸರವನ್ನು ಅವಲಂಬಿಸಿದೆ ಎಂದರೆ ತಪ್ಪಾಗಲಾರದು. 2025ರ ಘೋಷವಾಕ್ಯವಾದ “ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ವಿಶ್ವ ಪರಿಸರ ದಿನದ ಪ್ರಯುಕ್ತ ಗುರುವಾರ ಜೂನ್ 5 ರಂದು ಮಹಾವಿದ್ಯಾಲಯದ ಆವರಣದಲ್ಲಿ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ವೃಕ್ಷಾರೋಪಣ ಮಾಡಿ ಅವರು ಮಾತನಾಡಿದರು.
ಆದರೆ ಇತ್ತೀಚಿನ ದಿನಗಳಲ್ಲಿ ಮಾನವನ ದುರಾಸೆಯಿಂದ ಗಾಳಿ, ನೀರು, ಮಣ್ಣು, ಅಕ್ರಮ ವನ್ಯಜೀವಿ ವ್ಯಾಪಾರ, ಪ್ಲಾಸ್ಟಿಕ್ ಮಾಲಿನ್ಯ, ಸುಸ್ಥಿರವಲ್ಲದ ಬಳಕೆ ಮುಂತಾದವು ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ನಾವು ಕುಡಿಯುವ ನೀರು, ಆಹಾರ ನಮ್ಮ ದೇಹದಲ್ಲಿ ಸೇರುತ್ತಿವೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಅತ್ಯಂತ ಸುಂದರವಾದ ದೃಶ್ಯವೆಂದರೆ ನಮ್ಮ ಪರಿಸರ, ಆದ್ದರಿಂದ ಅದು ಹೆಚ್ಚು ಬೆಳೆಯುವುದನ್ನು ನೋಡಲು ಅದನ್ನು ರಕ್ಷಿಸಿ ಮತ್ತು ಸಂರಕ್ಷಿಸಲು ನಾವು ಕಾರ್ಯಪ್ರವೃತರಾಗಬೇಕು. ಜೊತೆಗೆ ಯಾವ ವಸ್ತುವನ್ನು ಪುರ್ನಬಳಕೆ ಮಾಡಲು ಸಾಧ್ಯವಿಲ್ಲವೋ ಆ ವಸ್ತುವನ್ನು ಬಳಸಲೇಬೇಡಿ ಎಂದು ಹೇಳಿದರು.
ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ವೀಣಾ ಎಸ್. ಜಲಾದೆ ಪ್ರಸ್ತಾವಿಕ ಮಾತನಾಡಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ವಿಶ್ವಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವದಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಸಂತೋಷಕುಮಾರ ಸಜ್ಜನ್, ಶಿಲ್ಪಾ ಹಿಪ್ಪರಗಿ, ರಾಜಕುಮಾರ ಸಿಂಧೆ, ಡಾ. ಸಿದ್ದರಾಮ ಎಸ್. ನೆಂಗಾ, ಪಾಂಡುರಂಗ ಕುಂಬಾರ ಹಾಗೂ ಸಿಬ್ಬಂದಿ ವರ್ಗದವರಾದ ಸಂಗೀತಾ ಪಾಟೀಲ, ಸುವರ್ಣಾ ಪಾಟೀಲ, ಪುಷ್ಪಾವತಿ, ರೇವಣಪ್ಪಾ ಮತ್ತು ಬಿ.ಎಡ್ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಸಾಗರ್ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ