ಬೆಂಗಳೂರು: ಆರ್ಸಿಬಿ ಐಪಿಎಲ್ ಫೈನಲ್ ನಲ್ಲಿ ಟ್ರೋಫಿ ಗೆದ್ದ ನಂತರ ಬೆಂಗಳೂರಿನಲ್ಲಿ ಲಕ್ಷಾಂತರ ಅಭಿಮಾನಿಗಳು ಸೇರಿ ಸಂಭ್ರಮಾಚರಣೆ ಮಾಡುವ ಸಮಯದಲ್ಲಿ ಕಾಲ್ತುಳಿತಕ್ಕೆ 11 ಜನ ಮೃತಪಟ್ಟಿದ್ದು ಸುಮಾರು ಜನ ವಿದ್ಯಾರ್ಥಿಗಳು ಗಾಯಗೊಂಡಿರುತ್ತಾರೆ, ಸಾಕಷ್ಟು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಮೃತಪಟ್ಟಿರುತ್ತಾರೆ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಅಖಿಲ ಕರ್ನಾಟಕ ವಿದ್ಯಾರ್ಥಿ ಯುವ ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಟಿ ಜೀವನ್ ಅವರು ಸಂತಾಪವನ್ನು ಸೂಚಿಸಿರುತ್ತಾರೆ ಐಪಿಎಲ್ ಸಂಭ್ರಮಾಚರಣೆಗೆ ಆಗಮಿಸುವ ಲಕ್ಷಾಂತರ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಲ್ಲಿ ಇದ್ದರೂ ಸರ್ಕಾರ ಪೂರ್ಣ ಸಿದ್ಧತೆಯನ್ನು ಮಾಡಿಕೊಳ್ಳದೆ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳದೆ ಬೇಜವಾಬ್ದಾರಿಯಿಂದ ನಡೆದುಕೊಂಡಿರುವ ಕರ್ನಾಟಕ ಸರ್ಕಾರ ಅಭಿಮಾನಿಗಳು ವಿದ್ಯಾರ್ಥಿಗಳ ಸಾವಿಗೆ ಕಾರಣರಾಗಿರುತ್ತಾರೆ ಇವರ ನಿರ್ಲಕ್ಷದಿಂದ 11 ಕುಟುಂಬಗಳು ಬೀದಿ ಪಾಲಾಗಿರುತ್ತಾರೆ ಮಕ್ಕಳ ವಿದ್ಯಾಭ್ಯಾಸದ ನಂತರ ಅವರ ತಂದೆ ತಾಯಿಯರು ಮತ್ತು ಪೋಷಕರು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ ಈ ದುರಂತದಿಂದ ಅವರ ಕನಸುಗಳೆಲ್ಲಾ ನುಚ್ಚುನೂರಾಗಿರುತ್ತವೆ ಅವರ ಕುಟುಂಬಕ್ಕೆ ಸರ್ಕಾರ 50 ಲಕ್ಷ ಪರಿಹಾರ ಹಾಗೂ ಐಪಿಎಲ್ ಕಮಿಟಿಯವರು ಮೃತ ಕುಟುಂಬಕ್ಕೆ 1 ಕೋಟಿ ಪರಿಹಾರಧನವನ್ನು ಘೋಷಣೆ ಮಾಡುವಂತೆ ಈ ಸಂದರ್ಭದಲ್ಲಿ ಒತ್ತಾಯ ಮಾಡುತ್ತೇನೆ ಎಂದು ಬಿ.ಟಿ ಜೀವನ್
ರಾಜ್ಯಾಧ್ಯಕ್ಷರು ರಾಜ್ಯ ಪ್ರಶಸ್ತಿ ಪುರಸ್ಕೃತರು ಅಖಿಲ ಕರ್ನಾಟಕ ವಿದ್ಯಾರ್ಥಿ ಯುವ ಸಂಘಟನೆ ಬೆಂಗಳೂರು
ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ
