ಶಿರಸಿ: ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಪರಮಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ “ವರ್ಧಂತಿ ಉತ್ಸವ” ನಡೆಯಿತು. ವರ್ಧಂತಿ ಉತ್ಸವದ ಅಂಗವಾಗಿ ಶ್ರೀ ಮಠದಲ್ಲಿ ಬೆಳಿಗ್ಗೆ ಗಣ ಹವನ, ಅಥರ್ವಶೀರ್ಷ ಹವನ, ಶ್ರೀ ಸೂಕ್ತ, ಪುರುಷ ಸೂಕ್ತ ಹವನ, ಗ್ರಹಶಾಂತಿ, ಮಹಾಮೃತ್ಯುಂಜಯ ಹವನಗಳು ಹಾಗೂ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ನಡೆದವು.
- ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ
