ಬಳ್ಳಾರಿ / ಕಂಪ್ಲಿ : ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣದ ಪ್ರಥಮ ದರ್ಜೆ ಕಾಲೇಜು ಬಳಿ ಇರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಝ್, ಧಾರ್ಮಿಕ ಪ್ರವಚನಗಳು ನಡೆದವು.
ಮುಸ್ಲಿಂ ಭಾಂದವರು ಶ್ರದ್ದೆ ಭಕ್ತಿಯಿಂದ ಆಚರಿಸಿದರು.
ಮುಂಜಾನೆಯೇ ನಗರದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಲ್ಲಾ ಮೊಹಲ್ಲಾ ಜಾಮಿಯಾ ಮಸೀದಿಯ ಇಮಾಮ್ ಸಾಬ್ ಹಾಜಿ ಮಹಮ್ಮಜೀಯಾವುದ್ದೀನ್ ರಜ್ವಿ ಪ್ರವಚನ ನೀಡಿ ಮಾತನಾಡಿ ಹಬ್ಬದ ಸಂದೇಶ ಸಾರಿ, ಬಕ್ರೀದ್ ಹಬ್ಬದ ಆಚರಣೆ ಹಾಗೂ ದಾನ-ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳುವಂತೆ ಕರೆ ನೀಡಿದರು.
ನಂತರ ಮುದ್ಧಪುರ ಆಗಸಿಯ ಇಮಾಮ್ ಹಫೀಜ್ ಸಾಬ್ ಮಹಮ್ಮದ ಸಿರಾಜುದ್ದೀನ ಖಲಂದರಿ ಸಾಮೂಹಿಕ ನಮಾಜ್ ಮತ್ತು ಖುತ್ಬಾ ಪಾರಾಯಣ ನಡೆಸಿಕೊಟ್ಟರು.
ಪ್ರಾರ್ಥನೆಯ ಬಳಿಕ ಮುಸ್ಲಿಂ ಭಾಂದವರು ಪರಸ್ಪರ ಶುಭಾಶಯ ವಿನಿಮಯ
ಸಾಮೂಹಿಕ ಪ್ರಾರ್ಥನೆಯಲ್ಲಿ ಸಂದರ್ಭದಲ್ಲಿ ಮಸೀದಿಗಳ ಪೇಶ ಇಮ್ಮಮ್ ಗುರುಗಳು ಮುಸ್ಲಿಂ ಸಮಾಜದ ಹಿರಿಯರು ಹಾಗೂ ಮುಖಂಡರು ಭಾಗಿಯಾಗಿದ್ದರು. ಇನ್ನು ಸಾಮೂಹಿಕ ಪ್ರಾರ್ಥನೆಯಲ್ಲಿ ಮಕ್ಕಳು ಕೂಡಾ ಪಾಲ್ಗೊಂಡರು.
ಬಕ್ರೀದ್ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಿಗಿ ಬಂದೋ ಬಸ್ತ್ ಒದಗಿಸಲಾಗಿತ್ತು.
ವರದಿ : ಜಿಲಾನಸಾಬ್ ಬಡಿಗೇರ್
