ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬ ಆಚರಣೆ

ಬಳ್ಳಾರಿ / ಕಂಪ್ಲಿ : ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣದ ಪ್ರಥಮ ದರ್ಜೆ ಕಾಲೇಜು ಬಳಿ ಇರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಝ್, ಧಾರ್ಮಿಕ ಪ್ರವಚನಗಳು‌ ನಡೆದವು.
ಮುಸ್ಲಿಂ ಭಾಂದವರು ಶ್ರದ್ದೆ ಭಕ್ತಿಯಿಂದ ಆಚರಿಸಿದರು.

ಮುಂಜಾನೆಯೇ ನಗರದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಲ್ಲಾ ಮೊಹಲ್ಲಾ ಜಾಮಿಯಾ ಮಸೀದಿಯ ಇಮಾಮ್ ಸಾಬ್ ಹಾಜಿ ಮಹಮ್ಮಜೀಯಾವುದ್ದೀನ್ ರಜ್ವಿ ಪ್ರವಚನ ನೀಡಿ ಮಾತನಾಡಿ ಹಬ್ಬದ ಸಂದೇಶ ಸಾರಿ, ಬಕ್ರೀದ್ ಹಬ್ಬದ ಆಚರಣೆ ಹಾಗೂ ದಾನ-ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳುವಂತೆ ಕರೆ ನೀಡಿದರು.

ನಂತರ ಮುದ್ಧಪುರ ಆಗಸಿಯ ಇಮಾಮ್ ಹಫೀಜ್ ಸಾಬ್ ಮಹಮ್ಮದ ಸಿರಾಜುದ್ದೀನ ಖಲಂದರಿ ಸಾಮೂಹಿಕ ನಮಾಜ್ ಮತ್ತು ಖುತ್ಬಾ ಪಾರಾಯಣ ನಡೆಸಿಕೊಟ್ಟರು.

ಪ್ರಾರ್ಥನೆಯ ಬಳಿಕ ಮುಸ್ಲಿಂ ಭಾಂದವರು ಪರಸ್ಪರ ಶುಭಾಶಯ ವಿನಿಮಯ

ಸಾಮೂಹಿಕ ಪ್ರಾರ್ಥನೆಯಲ್ಲಿ ಸಂದರ್ಭದಲ್ಲಿ ಮಸೀದಿಗಳ ಪೇಶ ಇಮ್ಮಮ್ ಗುರುಗಳು ಮುಸ್ಲಿಂ ಸಮಾಜದ ಹಿರಿಯರು ಹಾಗೂ ಮುಖಂಡರು ಭಾಗಿಯಾಗಿದ್ದರು. ಇನ್ನು ಸಾಮೂಹಿಕ ಪ್ರಾರ್ಥನೆಯಲ್ಲಿ ಮಕ್ಕಳು ಕೂಡಾ ಪಾಲ್ಗೊಂಡರು.

ಬಕ್ರೀದ್ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಿಗಿ ಬಂದೋ ಬಸ್ತ್ ಒದಗಿಸಲಾಗಿತ್ತು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ