ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಡಂಚಿನ ದಿನ್ನಳ್ಳಿ ಗ್ರಾಮ ಪಂಚಾಯ್ತಿ ಕೇಂದ್ರ ದಿನ್ನಳ್ಳಿ ಹಾಗೂ ಸರಹದ್ದಿನ ಸತ್ಯ ಮಂಗಲ ಗ್ರಾಮಕ್ಕೆ ಶಾಸಕ ಎಂ. ಆರ್. ಮಂಜುನಾಥ್ ಭೇಟಿ ನೀಡಿ ಜನರಲ್ಲಿ ಸ್ಥಳೀಯ ಮಟ್ಟದಲ್ಲಿ ತಲೆದೂರಿರುವ ಸಮಸ್ಯೆಗಳನ್ನು ಆಲಿಸಿದರು.
ಕ್ಷೇತ್ರದ ಗಡಿ ಕಾಡಂಚಿನ ಪ್ರದೇಶದ ಗ್ರಾಮಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಶಾಸಕರು ಜನ ಸಾಮಾನ್ಯರು ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಗಮನ ಹರಿಸುವಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ನಂತರ ಸಮರ್ಪಕ ರಸ್ತೆ ಚರಂಡಿ ಬೀದಿದೀಪ ನಿರ್ವಹಣೆ ಕುಡಿಯುವ ನೀರು ಸೇರಿದಂತೆ ಇನ್ನಿತರ ಮೂಲ ಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲಾ ಗ್ರಾಮಗಳಲ್ಲಿ ಕಲುಷಿತ ಕುಡಿಯುವ ನೀರು ಟ್ಯಾಂಕ್ ಗಳು ತೊಂಬೆಗಳು ಚರಂಡಿ ಇನ್ನಿತರ ಸ್ವಚ್ಚತೆ ಕಾಪಾಡುವಂತೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದರು.
ಅರಣ್ಯ ಇಲಾಖೆ ವತಿಯಿಂದ ಕಾಡಂಚಿನ ರೈತಾಪಿ ವರ್ಗದ ಜನರಿಗೆ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸುವ ಮೂಲಕ ದಿನ್ನಳ್ಳಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಸತ್ಯಮಂಗಲ ಗ್ರಾಮ ಸೇರಿದಂತೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲಾ ರೈತರ ಜಮೀನುಗಳಿಗೆ ಬ್ಯಾರಿಕೇಡ್ ಅಳವಡಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕ್ರಮ ವಹಿಸುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಎಸಿಎಫ್ ಉಮಾಪತಿ, ಜೆ.ಜೆ ಎಂ. ಇಂಜಿನಿಯರ್ ಶಶಿ,ಕೆ ಆರ್ ಡಿ ಎಲ್ ಇಂಜಿನಿಯರ್ ಕಾರ್ತಿಕ್, ಗ್ರಾಮ ಪಂಚಾಯಿತಿ ಅಬಿವೃದ್ಧಿ ಅಧಿಕಾರಿ ಸುರೇಶ್, ಗ್ರಾಮ ಲೆಕ್ಕಾಧಿಕಾರಿ ಪ್ರಸಾದ್, ಇಂಜಿನಿಯರ್ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಮುಖಂಡರುಗಳಾದ ಎಸ್.ಆರ್ ಮಹದೇವ್ ,ದಿನ್ನಳ್ಳಿ ಮೂರ್ತಿ, ಕೊತ್ತುಗುಳಿ ರಾಜು,ಗೊಳ್ಳರದಿಂಬ ರಾಜು,ರಾಮ,ಚಂದ್ರ,ಶಿವು,ಗೊಳ್ಳರದಿಂಬ ರಾಮು ಸಿದ್ದರಾಜು,ಗೋಪಾಲ್ ನಾಯಕ ವಿಜಯ್ ಕುಮಾರ್ ಗೋವಿಂದ ಮಣಿ ಇನ್ನಿತರರು ಹಾಜರಿದ್ದರು.
ವರದಿ :ಉಸ್ಮಾನ್ ಖಾನ್
