ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಸಿರಿಗಾಗಿ ಹಸಿರು: ಶಾಸಕರಾದ ಯಶವಂತರಾಯಗೌಡ ಪಾಟೀಲ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೊಳೂರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾವಳಸಂಗ ಗ್ರಾಮದ ಅರಣ್ಯವಲಯದಲ್ಲಿ ಶ್ರೀ ಯಶವಂತರಾಯಗೌಡ ವಿ ಪಾಟೀಲ್ ಫೌಂಡೇಶನ್ ( ರಿ.) ಪಡನೂರ, ಸಾಮಾಜಿಕ ಮತ್ತು ಪ್ರಾದೇಶಿಕ ಅರಣ್ಯ ವಲಯ (ಅರಣ್ಯ ಇಲಾಖೆ) ಇಂಡಿ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋಧ್ಯಾನ ಸಾವಳಸಂಗ ಉಸಿರಿಗಾಗಿ– ಹಸಿರು ಅಭಿಯಾನ ಕಾರ್ಯಕ್ರಮಕ್ಕೆ ಇಂಡಿ ಮತಕ್ಷೇತ್ರದ ಶಾಸಕರಾದ ಶ್ರೀ ಯಶವಂತರಾಯಗೌಡ ಪಾಟೀಲ ಅವರು ಚಾಲನೆ ನೀಡಿದರು.
ಮೊದಲಿಗೆ TATA IPL ನಲ್ಲಿ ಗೆದ್ದ RCB ಯ ವಿಜಯೋತ್ಸವ ನಿಮಿತ್ಯ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ನಿಧನ ಹೊಂದಿದ ಕ್ರೀಡಾ ಅಭಿಮಾನಿಗಳ ಆತ್ಮಕ್ಕೆ ಶಾಂತಿ ಸಿಗಲೆಂದು 2 ನಿಮಿಷ ಮೌನಾಚರಣೆ ಮಾಡಲಾಯಿತು. ನಾಡಗೀತೆ ಹಾಡುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಶಾಸಕರಾದ ಶ್ರೀ ಯಶವಂತರಾಯಗೌಡ ಪಾಟೀಲ ಅವರು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು ನಮಗೆ ಅನ್ನ ನೀಡುವುದೇ ಪರಿಸರ, ಪರಿಸರ ಬೆಳೆಸುವ ಜಾಗೃತಿ ಮೂಡಿಸಬೇಕಾಗಿದೆ. ಸಾಮಾಜಿಕ ಅರಣ್ಯ ವಲಯ ಹಾಗೂ ಪ್ರಾದೇಶಿಕ ಅರಣ್ಯವಲಯ ಅಧಿಕಾರಿಗಳ ಸೇವೆಗೆ ಅಭಿನಂದನೆ ವ್ಯಕ್ತಪಡಿಸಿದರು. ಭೂ ವಿಜ್ಞಾನ ಅಧಿಕಾರಿಗಳ ಜೊತೆ ಹೊಸ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಸಿದ್ದೇಶ್ವರ ಮಹಾಸ್ವಾಮೀಜಿ ಅವರ ಆಶೀರ್ವಾದದಿಂದ ಈ ಸಾವಲಸಂಗ ಗುಡ್ಡಕ್ಕೆ ನೀರು ಆಗಿದೆ. ನಮಗೆ ಬರುತ್ತಿರುವ ನೀರನ್ನು ನಾವೆಲ್ಲಾ ಸರಿಯಾದ ರೀತಿ ಸದುಪಯೋಗ ಪಡಿಸಿಕೊಂಡಿದ್ದೆ ಆದಲ್ಲಿ, ನಮ್ಮ ಇಡೀ ವಿಜಯಪುರ ಜಿಲ್ಲೆಯ ಅಭಿವೃದ್ಧಿ ಆಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು. ಸಾಮಾಜಿಕ ಚಿಂತನೆ ಹಾಗೂ ನೈಸರ್ಗಿಕ ಚಿಂತನೆ ಎಲ್ಲರೂ ಇಟ್ಟುಕೊಳ್ಳಿ ಹಾಗೂ ನಾವೆಲ್ಲಾ ನಿಸರ್ಗವನ್ನು ಪ್ರೀತಿಸೋಣ ಎಂದು ತಿಳಿಸಿದರು. ಸಾಲು ಮರದ ತಿಮ್ಮಕ್ಕ ಜೀವನ ಶೈಲಿಯನ್ನು ಹಾಗೂ ಅವರಿಗೆ ಇರುವ ಪರಿಸರ ಪ್ರೇಮ ನಾವೆಲ್ಲರೂ ಬೆಳಿಸಿಕೊಳ್ಳೋಣ ಅವರ ನಿಟ್ಟಿನಲ್ಲಿ ನಾವು ಸಾಗೋಣ ಪರಿಸರ ಬೆಳೆಸೋಣ ಎಂದು ಹೇಳಿದರು.
ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ ಕಾತ್ರಾಳ – ಬಾಲಗಾಂವ ಗುರುದೇವ ಆಶ್ರಮದ ಶ್ರೀ ಅಮೃತಾನಂದ ಸ್ವಾಮೀಜಿ ಅವರು ತಮ್ಮ ಆಶೀರ್ವಚನದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ರವರಿಗೆ ಇರುವ ಪರಿಸರ ಪ್ರೇಮದ ಕುರಿತು ಕೆಲವು ಸನ್ನಿವೇಶಗಳನ್ನು ಭೋದಿಸಿದರು. ಅರಣ್ಯ ಬೆಳೆಸುವಲ್ಲಿ ನಾವೆಲ್ಲರೂ ಶ್ರಮಿಸೋಣ ಹಾಗೂ ರಕ್ಷಿಸೋಣ. ಯಥಾ ದೃಷ್ಟಿ, ತಥಾ ಸೃಷ್ಟಿ , ನಮ್ಮ ದೇಹ ಯಾವ ರೀತಿ ಇರುತ್ತೋ/ ನಾವು ನೋಡುವ ನೋಟ ಚೆನ್ನಾಗಿರುತ್ತೋ – ಅದೇ ರೀತಿ ಪರಿಸರ ಇರುತ್ತೆ ಹಾಗಾಗಿ ನಮ್ಮ ದೇಹ ರಕ್ಷಿಸುವ ಹಾಗೆ ನಾವೆಲ್ಲ ಪರಿಸರವನ್ನು ರಕ್ಷಿಸಬೇಕು ಎಂದು ಸಂದೇಶ ನೀಡಿದರು. ಮೊದಲು ಗಿಡದ ಕೆಳಗೆ ಸ್ನಾನ ಮಾಡುವುದರ ಮೂಲಕ ಗಿಡಗಳನ್ನು ಬೆಳೆಸುತ್ತಿದ್ದರು. ಇಂತಹ ಅನೇಕ ಪ್ರೇರಣೆ ಮಾತುಗಳನ್ನು ಹೇಳಿ ಸಾರ್ವಜನಿಕರಲ್ಲಿ ಪರಿಸರ ಪ್ರೇಮವನ್ನು ಜಾಗೃತಗೊಳಿಸಿದರು.
ಸಮಾರಂಭದಲ್ಲಿ ಶಾಲಾ ಮಕ್ಕಳು ಹಾಗೂ ರೈತರಿಂದ 3300 ಸಸಿ ನೆಡುವುದು ಮತ್ತು ಬೀಜದ ಉಂಡೆ ಬಿತ್ತನೆ ಕಾರ್ಯಕ್ರಮ ಹಾಗೂ ಜಾಗೃತಿಗಾಗಿ -ಉಸಿರಿಗಾಗಿ- ಹಸಿರು ಪರಿಸರ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಡೋಮನಾಳದ ಶ್ರೀ ಎನ್.ಡಿ.ಪಾಟೀಲ, ಮುಖ್ಯ ಅತಿಥಿಗಳಾಗಿ ಬಾದಾಮಿಯ ಶ್ರೀ ಎಸ್.ಎಚ್.ವಾಸನ್, ಅರಣ್ಯ ಇಲಾಖೆಯ ಡಿಎಫ್‌ಒ ಶ್ರೀ ವನಿತಾ.ಆರ್, ವಿಜಯಪುರದ ಡಿಎಫ್‌ಒ ಶಿವಶರಣಯ್ಯ ಕೆ. ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರೀ ವಿಜಯಕುಮಾರ ಆಜೂರ, ಇಂಡಿಯ ಕಂದಾಯ ಉಪ ವಿಭಾಗಾಧಿಕಾರಿ ಶ್ರೀಮತಿ ಅನುರಾಧ ವಸ್ತ್ರದ, ಇಂಡಿ ತಹಶೀಲ್ದಾರ್ ಶ್ರೀ ಬಿ.ಎಸ್. ಕಡಕಭಾವಿ, ಚಡಚಣ ತಹಶೀಲ್ದಾರ್ ಶ್ರೀ ಎಸ್.ಬಿ. ಇಂಗಳೆ, ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ ರಾಠೋಡ, ಚಡಚಣ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಖಡಗೇಕರ, ವಿಜಯಪುರದ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಚಡಚಣ ಕ್ಷೇತ್ರ ಸಮನ್ವಯಾಧಿಕಾರಿ ಸುಜಾತಾ ಹುನ್ನೂರ, ಹಾಗೂ ಎಸ್. ಶ್ರೀ ಆ‌ರ್.ನಡುಗಡ್ಡಿ, ಇಂಡಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಮಹಾದೇವಪ್ಪ ಏವೂರ, ಇಂಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಎಚ್.ಎಸ್.ಪಾಟೀಲ, ಇಂಡಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಾದ ಉಮೇಶ ಲಮಾಣಿ , ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ತಾಂತ್ರಿಕ ಸಂಯೋಜಕರು ಶ್ರೀ ಸಾಹೀಲ್ ದನಶೆಟ್ಟಿ, ಇಂಡಿ ಮತ್ತು ಚಡಚಣ ತಾಲೂಕಿನ ಶಾಲಾ ಶಿಕ್ಷಕರ ಮತ್ತು ವಿದ್ಯಾರ್ಥಿಗಳು ಹಾಗೂ ಇಂಡಿ-ಚಡಚಣ ತಾಲೂಕಿನ ಎಲ್ಲ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ,ತಾಲೂಕ ಪಂಚಾಯತ ಸಿಬ್ಬಂದಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ. ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ