ಬಳ್ಳಾರಿ / ಕಂಪ್ಲಿ : ನಗರದ ಶುಗರ್ ಫ್ಯಾಕ್ಟರಿಯಲ್ಲಿರುವ ಕ್ವಿನ್ ಮೇರಿ ಅಂಗ್ಲ ಮಾಧ್ಯಮ ಹಿರಿಯ ಹಾಗೂ ಪ್ರೌಢ ಶಾಲೆಯಲ್ಲಿ ಅರ್ಥಪೂರ್ಣವಾಗಿ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಶಾಲೆಯ ಫಾದರ್ ಸುನಿಲ್ ಸಸಿ ನೆಟ್ಟು ನೀರೆರೆದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬೆಳೆಯವ ಪೈರು ಮೊಳಕೆಯಲ್ಲೇ ಎನ್ನುವಂತೆ ಬಾಲ್ಯದಿಂದಲೂ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಕಾಡಿನ ನಾಶ, ಜಲ ಮಾಲಿನ್ಯ, ಅತಿಯಾದ ಪ್ಲಾಸ್ಟಿಕ್ ಬಳಕೆ, ಹವಾಮಾನ ವೈಪರೀತ್ಯ ಮುಂತಾದವುಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಹಾಗೂ ಪರಿಸರವನ್ನು ಉಳಿಸಿ, ಬೆಳೆಸುವ ಮಹತ್ವವನ್ನು ಸಾರುವ ಉದ್ದೇಶದಿಂದ ಪ್ರತೀ ವರ್ಷ ಜೂನ್ 5 ರಂದು ನಮ್ಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ಹೊತ್ತಿನಲ್ಲಿ ಪರಿಸರ ಉಳಿಸುವುದು ಬಹಳ ಅವಶ್ಯವಾಗಿರುವ ಕಾರಣ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿಸಲಾಗುತ್ತಿದೆ ಇಂದು ಬಹಳ ಅರ್ಥಪೂರ್ಣವಾಗಿ ಪರಿಸರ ದಿನವನ್ನು ಆಚರಿಸುವ ಮೂಲಕ ಪರಿಸರ ಉಳಿಸಿ, ಬೆಳಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿಸ್ಟರ್ ಬೆನ್ನಿ, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ : ಜಿಲಾನಸಾಬ್ ಬಡಿಗೇರ
