ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಸ್ಲಿಂ ಬಾಂಧವರಿಂದ ಬಕ್ರೀದ್ ಹಬ್ಬ ಆಚರಣೆ

ಕಲಬುರಗಿ/ ಚಿತ್ತಾಪುರ : ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸ್ನೇಹ, ಸೌಹಾರ್ದತೆಯಿಂದ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.
ಬೆಳಗ್ಗೆ 7 ಗಂಟೆಯಿಂದ ಪಟ್ಟಣ ಹಾಗೂ ವಿವಿಧ ಗ್ರಾಮಗಳ ಮಸೀದಿ ಹಾಗೂ ಈದ್ಗಾ ಮೈದಾನಗಳಲ್ಲಿ ಈದುಲ್ ಅಝಹಾ ನಿಮಿತ್ತ ವಿಶೇಷ ನಮಾಜ್ ಮತ್ತು ಇಮಾಮಗಳಿಂದ ವಿಶೇಷ ಉಪನ್ಯಾಸದ ಮೂಲಕ ದೇಶದ ಏಕತೆ ಸುಭದ್ರತೆಗಾಗಿ ಪ್ರಾರ್ಥನೆ ಮಾಡಲಾಯಿತು.
ನಂತರ ಬಾಹರಪೇಟ್ ಸಮೀಪದ ಈದ್ಗಾ ಮೈದಾನದಲ್ಲಿ ಮೌಲಾನ ಸಿದ್ಧೀಕ್ ಮಾತನಾಡಿ, ದ್ವೇಷ, ಮದ ಮತ್ಸರ ಹಾಗೂ ಗುರು ಹಿರಿಯರಿಗೆ ಮತ್ತು ವಿಶೇಷವಾಗಿ ತಂದೆ ತಾಯಿಗಳಿಗೆ ಅತ್ಯಂತ ಗೌರವಿತವಾಗಿ ಕಾಣುವ ಮೂಲಕ ದೇವರನ್ನು ಮೆಚ್ಚಿಸಬೇಕು ಎಂದು ಕರೆ ನೀಡಿದರು.
ತನ್ನ ಮನಸ್ಸುಗಳನ್ನು ಹತೋಟಿಯಲ್ಲಿಟ್ಟು ಅಸೂಯೇ, ಆಸೆ, ದುರಾಸೆಗಳಿಗೆ ಬರೆ ಹಾಕಿ ತ್ಯಾಗ ಮತ್ತು ಬಲಿದಾನ ಮಾಡಿ ಪರಸ್ಪರ ಪ್ರೀತಿ, ಸಮಾನತೆಯಿಂದ ಬಡವರ ನೆರವಿಗೆ ಧಾವಿಸುವ ಕಾಳಜಿ ಹೊಂದುವ ಮನಸ್ಥಿತಿ ಹೊಂದುವುದು ಮುಖ್ಯವಾಗಿದ್ದು, ಅನ್ಯಾಯವನ್ನು ತಡೆಯುವಂತವರಾಗಬೇಕು ಎಂದರು.
ಪೊಲೀಸರು ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿದರು

ವರದಿ ಮೊಹಮ್ಮದ್ ಅಲಿ, ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ