ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

ಹುಬ್ಬಳ್ಳಿ : ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡ ಅವರ ಕೊಲೆ ಪ್ರಕರಣದ ಆರೋಪಿ ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಜೂ. 6) ರದ್ದುಪಡಿಸಿದೆ. ಇದರಿಂದ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಸೇರುವ ಭೀತಿ ಶುರುವಾಗಿದೆ.

ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸಲು ಹಾಗೂ ಅವರ ಮೇಲೆ ಪ್ರಭಾವ ಬೀರಲು ವಿನಯ್ ಕುಲಕರ್ಣಿ ಹಾಗೂ ಮತ್ತೊಬ್ಬ ಆರೋಪಿ ಪ್ರಯತ್ನಿಸಿದ್ದಾರೆ. ವಿಶ್ವಾಸಾರ್ಹ ಪುರಾವೆಗಳಿಂದ ಇದು ದೃಢಪಟ್ಟಿದೆ. ಷರತ್ತುಗಳ ಉಲ್ಲಂಘನೆಯಾಗಿರುವ ಕಾರಣ ಜಾಮೀನನ್ನು ರದ್ದುಪಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

9 ತಿಂಗಳು ಜೈಲಿನಲ್ಲಿದ್ದ ವಿನಯ್ ಕುಲಕರ್ಣಿಗೆ ಆಗಸ್ಟ್ 11, 2021ರಂದು ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆಗಸ್ಟ್​ 13ರಂದು ಅವರು ಜೈಲಿನಿಂದ ಹೊರಗೆ ಬಂದಿದ್ದರು. ಜಾಮೀನು ನೀಡುವ ವೇಳೆ ಸುಪ್ರೀಂ ಕೋರ್ಟ್ ಅನೇಕ ಷರತ್ತುಗಳನ್ನು ವಿಧಿಸಿತ್ತು. ಅದರಲ್ಲಿ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶ ಮಾಡುವಂತಿಲ್ಲ ಅನ್ನೋದು ಪ್ರಮುಖ ಷರತ್ತು. ಆದರೂ, ಈ ನಡುವೆಯೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಭರ್ಜರಿ ಗೆಲುವು ಸಾಧಿಸಿ ಶಾಸಕರಾಗಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ