ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಈ ಹಿಂದೆ ಶರಣ ಸಾಹಿತ್ಯ ಪರಿಷತ್ ಹಾಗೂ ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್ ತಾಲೂಕ ಅಧ್ಯಕ್ಷರಾಗಿ ಗಣನೀಯವಾಗಿ ಕಾರ್ಯವನ್ನಾಗಲಿ ಹಾಗೂ ಸುದೀರ್ಘವಾಗಿ ಮೂವತ್ತು ವರ್ಷಗಳ ಕಾಲ ಕನ್ನಡ ನೆಲ, ಜಲ ಹಾಗೂ ಸಂಸ್ಕೃತಿಗಾಗಿ ಸೇವೆ ಸಲ್ಲಿಸುತ್ತಿರುವುದನ್ನು ಗುರ್ತಿಸಿ ವಿಶ್ವ ಪ್ರಕಾಶನ ಸಂಸ್ಥೆ ಹಾಗೂ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ ಪ್ರೊ. ಕೃಷ್ಣ ನಾಯಕ ರವರ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜೇವರ್ಗಿ ತಾಲೂಕ ಅಧ್ಯಕ್ಷರಾದ ಶ್ರೀ ಎಸ್ ಕೆ ಬಿರಾದಾರವರ ಅಭೂತಪೂರ್ವ ಸೇವೆಯನ್ನು ಗಮನಿಸಿ ಕನ್ನಡದ ಕಟ್ಟಾಳು ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀ ವಿಜಯಕುಮಾರ ಪಾಟೀಲ್ ತೆಗಲತಿಪ್ಪಿ, ಹಿರಿಯ ಸಾಹಿತಿ ಶ್ರೀ ಬಾಳಾಸಾಬ್ ಲೋಕಾಪುರ,ಲೋಕ ಸೇವಾ ಆಯೋಗದ ಸದಸ್ಯರಾದ ಶ್ರೀಮತಿ ನಾಗಾಬಾಯಿ ಬುಳ್ಳ,ಡಾಃ ನಾರಾಯಣ ಪವಾರ್, ಪ್ರೊ: ಕೃಷ್ಣ ನಾಯಕ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
- ಕರುನಾಡ ಕಂದ
