ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಸಹ ಕಾರ್ಯದರ್ಶಿಯಾಗಿ ಡಿ. ಮೌನೇಶ ಆಯ್ಕೆ

ಬಳ್ಳಾರಿ / ಕಂಪ್ಲಿ : ನಗರದ ಕಾಳಿಕಾ ಕಮ್ಮಠೇಶ್ವರ ದೇವಸ್ಥಾನ ಬಳಿಯ ವಿಶ್ವಕರ್ಮ ಭವನದಲ್ಲಿ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಿ.ವೌನೇಶ ಆಯ್ಕೆಗೊಂಡಿದ್ದಾರೆ.
ಐದು ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನಲೆ ಡಿ. ಮೌನೇಶ ರವರು ಸದಸ್ಯರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದರು.
ರವಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಶೇಷಾದ್ರಿಪುರಂ ವಿಶ್ವಕರ್ಮ ಸಮಾಜದ ಕಚೇರಿಯಲ್ಲಿ ನಡೆದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳ ಪದಗ್ರಹಣ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಸಹ ಕಾರ್ಯದರ್ಶಿಯಾಗಿ ಡಿ. ಮೌನೇಶ ಆಯ್ಕೆಗೊಂಡು ಪದಗ್ರಹಣ ಸ್ವೀಕರಿಸಿದರು.

ಪದಾಧಿಕಾರಿಗಳ ಆಯ್ಕೆ :
ಗೌರವಾಧ್ಯಕ್ಷ ಉಮೇಶ್ ಆಚಾರ್ ಅಧ್ಯಕ್ಷ ಈಶ್ವರ ಆಚಾರ್ , ಉಪಾಧ್ಯಕ್ಷ ರಾಮಣ್ಣ ಬಡಿಗೇರ್,
ಕಾರ್ಯಧ್ಯಕ್ಷ ಬಾಬು ಪತ್ತಾರ್,
ಸಹ ಕಾರ್ಯದರ್ಶಿಯಾಗಿ ಡಿ. ಮೌನೇಶ ಕಂಪ್ಲಿ,
ಪ್ರಧಾನ ಕಾರ್ಯದರ್ಶಿ ಶರತ್ ಚಂದ್ರ,
ಪದಗ್ರಹಣ ಸ್ವೀಕರಿಸಿದರು.

ನಂತರ ಮಾತನಾಡಿ ಈ ಸ್ಥಾನದೊಂದಿಗೆ ಹೆಚ್ಚಿನ ಜವಾಬ್ದಾರಿ ನೀಡಿದ್ದು ಎಲ್ಲರ ಪ್ರೀತಿ, ವಿಶ್ವಾಸದಂತೆ ಸಮಾಜದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು. ಪ್ರಾಮಾಣಿಕವಾಗಿ ಸೇವೆ ಮಾಡಲಾಗುವುದು, ಪಂಚ ಕುಲಕಸುಬುಗಳಿಗೆ ಪ್ರತ್ಯೇಕ ವಿಶ್ವಕರ್ಮ ವಿಶ್ವವಿದ್ಯಾಲಯ ಬೇಡಿಕೆ ಈಡೇರಿಸುವಂತೆ ಮತ್ತು ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ಬಿಡುಗಡೆೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಈಶ್ವರ ಆಚಾರ್ ಎಂಪಿ, ಉಮೇಶ ಬಿ, ಕೆ ಚಂದ್ರಶೇಖರ ಆಚಾರ್, ಬಾಬು ಪತ್ತಾರ್, ಡಿ. ರವಿಶಂಕರ, ಕೆಎನ್. ಲಕ್ಷ್ಮಣ, ಎಂ. ಪಿ. ಶರತ್ ಚಂದ್ರ ಸೇರಿದಂತೆ ಸಮಾಜದ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಮುಖಂಡರು ಹಾಜರಿದ್ದರು.

ಇವರ ಆಯ್ಕೆಗೆ ಕಂಪ್ಲಿಯ ಜನಪ್ರಿಯ ಶಾಸಕ ಜೆ.ಎನ್. ಗಣೇಶ ಹಾಗೂ ವಿವಿಧ ಸಂಘ – ಸಂಸ್ಥೆಗಳು ಇವರ ಆಯ್ಕೆಗೆ ಶುಭ ಹಾರೈಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ