ಚಾಮರಾಜನಗರ/ ಹನೂರು: ಪಿ ಜಿ ಪಾಳ್ಯ 66/11 ಕೆವಿ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಜೂನ್ 10 ರಂದು ಪಿ ಜಿ ಪಾಳ್ಯ ಒಡೆಯರಪಾಳ್ಯ ಹುತ್ತೂರು ಬೈಲೂರು ಟಿಬೇಟ್ ಕ್ಯಾಂಪ್ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ ೧೦ ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗುವುದರಿಂದ ಸಾರ್ವಜನಿಕರು, ರೈತರು ಹಾಗೂ ಗ್ರಾಹಕರು ವಿದ್ಯುತ್ ವ್ಯತ್ಯಯಕ್ಕೆ ಸಹಕರಿಸಬೇಕೆಂದು ಎಇಇ ರಂಗಸ್ವಾಮಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ವರದಿ: ಉಸ್ಮಾನ್ ಖಾನ್
