ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಳೆಗಾಲದಲ್ಲಿ ಗಿಡಮರಗಳ ಕೆಳಗಡೆ ವಾಹನಗಳನ್ನು ನಿಲ್ಲಿಸಬೇಡಿ : ಅಮರೇಗೌಡ ಮಲ್ಲಾಪುರ ಮನವಿ

ರಾಯಚೂರು /ಸಿಂಧನೂರು :ನಗರದಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಸಿಂಧನೂರು ನಗರದೆಲ್ಲಡೆ ಗಿಡಮರಗಳು ನೆಲಕ್ಕುರುಳಿವೆ, ಅದಲ್ಲದೆ ಗಿಡಮರಗಳ ಕೆಳಗಡೆ ನಿಲ್ಲಿಸಿರುವ ವಾಹನಗಳ ಮೇಲೆ ಬಿದ್ದಿವೆ.ದಯವಿಟ್ಟು ಎಲ್ಲ ಸಾರ್ವಜನಿಕರು ಮಳೆ ಬರುವ ಸಮಯದಲ್ಲಿ ಗಿಡಮರಗಳ ಕೆಳಗಡೆ ವಾಹನಗಳನ್ನು ನಿಲ್ಲಿಸಬೇಡಿ ಎಂದು ವನಸಿರಿ ಅಮರೇಗೌಡ ಮಲ್ಲಾಪುರ ಮನವಿ ಮಾಡಿದರು.

ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭಗೊಂಡಿದ್ದು, ರಾಜ್ಯದಲ್ಲಿ ಇನ್ನೂ ಕೆಲ ದಿನಗಳ ಕಾಲ ಅತೀ ಹೆಚ್ಚು ಮಳೆ ಬೀಳಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಇದರಿಂದ ನಿನ್ನೆ ಸಿಂಧನೂರಿನಲ್ಲಿ ರಾತ್ರಿ ಪ್ರಾರಂಭಗೊಂಡ ಮಳೆ ಗುಡುಗು ಸಿಡಿಲಿನೊಂದಿಗೆ ರಾತ್ರಿವಿಡೀ ಸುರಿದು ಮಳೆಗೆ ನಗರದ ಹಲವಡೆ ಸುಮಾರು ಗಿಡಮರಗಳು ನೆಲಕ್ಕುರುಳಿವೆ. ಇದರಿಂದ ಗಿಡದ ಕೆಳಗಡೆ ಸಾರ್ವಜನಿಕರು ನಿಲ್ಲಿಸಿರುವ ಕಾರು,ಬೈಕ್ ಹಾಗೂ ಇನ್ನಿತರ ವಾಹನಗಳ ಮೇಲೆ ಗಿಡಗಳು ಬಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ.ಗುಡುಗು ಸಿಡಿಲಿನಿಂದ ಸಾರ್ವಜನಿಕರು, ಪ್ರಾಣಿಗಳಿಗೆ ಹಾನಿ ಉಂಟಾಗುತ್ತದೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಮಳೆಗಾಲದ ಸಮಯದಲ್ಲಿ ಗಿಡಮರಗಳ ಕೆಳಗಡೆ ವಾಹನಗಳನ್ನು ನಿಲ್ಲಿಸಬಾರದು, ಹಸು, ಎಮ್ಮೆ, ಕರುಗಳಂತಹ ಪ್ರಾಣಿಗಳನ್ನು ಗಿಡಕ್ಕೆ ಕಟ್ಟಬಾರದು ಮತ್ತು ತಾವೂ ಕೂಡಾ ನಿಂತುಕೊಳ್ಳಬಾರದು ಎಂದು ವನಸಿರಿ ಫೌಂಡೇಷನ್ ಅಧ್ಯಕ್ಷ ಅಮರೇಗೌಡ ಮಲ್ಲಾಪುರ ಸಾರ್ವಜನಿಕರಲ್ಲಿ ಮನವಿ ಮಾಡಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ