ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಣಿ ಸಂಯುಕ್ತ ಅವರು ಸಕ್ಕರೆ ಕಾರ್ಖಾನೆ ಪುನ: ಸ್ಥಾಪಿಸಲು ಮುಂದಾಗಿರುವುದು ಸಂತಸ : ಬಿ.ಗಂಗಾಧರ

ಬಳ್ಳಾರಿ / ಕಂಪ್ಲಿ : ವಿಜಯನಗರ ಜಿಲ್ಲೆಯ ಸಕ್ಕರೆ ಕಾರ್ಖಾನೆ ಪುನಃ ಸ್ಥಾಪಿಸುವುದು ಅತಿಮುಖ್ಯವಾಗಿದ್ದು, ಕಾರ್ಖಾನೆ ಪುನರ್ ಸ್ಥಾಪನೆ ಮಾಡಲು ರಾಣಿ ಸಂಯುಕ್ತ ಅವರು ಮುಂದಾಗಿರುವುದು ರೈತರ ಮೊಗದಲ್ಲಿ ಖುಷಿ ತಂದಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಬಿ.ಗಂಗಾಧರ ತಿಳಿಸಿದರು.
ಅವರು ಮಂಗಳವಾರ ಪಟ್ಟಣದ ಅತಿಥಿ ಗೃಹದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಂಘಟನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದವತಿಯಿಂದ ಈ ಹಿಂದೆ ವಿಜಯನಗರ ಜಿಲ್ಲೆಯ ಸಕ್ಕರೆ ಕಾರ್ಖಾನೆ ಪುನಃ ಸ್ಥಾಪನೆಗಾಗಿ ಬಹಳಷ್ಟು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಇದಲ್ಲದೇ ಇತ್ತೀಚೆಗೆ ಹಂಪಿಯಿಂದ ಸಾಕಷ್ಟು ರೈತರ ಸಮಕ್ಷಮದಲ್ಲಿ ಹೊಸಪೇಟೆವರೆಗೆ ಕಾಲ್ನಡಿಗೆಯಲ್ಲಿ ನ್ಯಾಯಮೂರ್ತಿ ಮಾಜಿ ಲೋಕಾಯುಕ್ತರಾದ ಸಂತೋಷ ಹೆಗ್ಡೆ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿದ್ದೇವೆ. ಆದರೆ, ಇದೀಗ ವಿಜಯನಗರ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಪುನಃ ಸ್ಥಾಪನೆ ಮಾಡಲು ರಾಣಿ ಸಂಯುಕ್ತ ಅವರು ಬಂಗಾರಿ ಶುಗರ್ಸ್ ಎಂದು ಬೊಮ್ಮನಹಳ್ಳಿ ತಾಲೂಕಿನ ಕೆಂಚನಬಂಡಿ ಗ್ರಾಮದಲ್ಲಿ ಮುಂದಾಗಿರುವುದು ಸಂತಸದ ವಿಷಯವಾಗಿದೆ. ಹೊಸಪೇಟೆ ಪ್ರದೇಶದ ಬಳಿಯಲ್ಲಿ ವೇ ಬ್ರಿಡ್ಜ್ ಸ್ಥಾಪಿಸಿ, ಕಬ್ಬು ಸಂಗ್ರಹಣಾ ಘಟಕ ಸ್ಥಾಪಿಸುವ ಭರವಸೆ ಇದೆ. ಆದ್ದರಿಂದ ರೈತರಲ್ಲಿ ಸಕ್ಕರೆ ಕಾರ್ಖಾನೆ ಮರುಸ್ಥಾಪಿಸುವ ಕಾಲ ಕೂಡಿ ಬಂದಿದೆ. ರಾಣಿ ಸಂಯುಕ್ತ ಅವರಿಗೆ ಬೆಂಬಲ ನೀಡುತ್ತೇವೆ ಎಂದರು.
ರಾಜ್ಯ ಉಪಾಧ್ಯಕ್ಷ ಎಸ್.ಎ.ಖಾದ್ರಿ ಮಾತನಾಡಿ, ವಿಜಯನಗರದಲ್ಲಿ ಸಕ್ಕರೆ ಕಾರ್ಖಾನೆ ಪುನ: ಆರಂಭಿಸುವುದು ಬಹುದಿನದ ಬೇಡಿಕೆಯಾಗಿದೆ. ಈಗಾಗಲೇ ಜನಪ್ರತಿನಿಧಿಗಳು ಕಾರ್ಖಾನೆ ಸ್ಥಾಪನೆಗೆ ಆಶ್ವಾಸನೆ ನೀಡಿದ್ದಾರೆ. ಆದರೆ, ಈಗ ಧೀಮಂತ ಮಹಿಳೆ ರಾಣಿ ಸಂಯುಕ್ತ ಅವರು ಕಾರ್ಖಾನೆ ಪುನ: ಸ್ಥಾಪಿಸಲು ಮುಂದಾಗಿರುವುದು ರೈತರಲ್ಲಿ ಹರ್ಷದಾಯಕವಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಎಸ್.ಎ.ಖಾದ್ರಿ, ಕಂಪ್ಲಿ ತಾಲೂಕು ಅಧ್ಯಕ್ಷ ಗುಬಾಜಿ ರಾಮಾಂಜಿನಿ, ವಿಜಯನಗರ ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ಯುವ ಘಟಕ ಅಧ್ಯಕ್ಷ ಕೆ.ಹರ್ಷಿತ್, ಪದಾಧಿಕಾರಿಗಳಾದ ಉಷಾ, ಹೆಚ್.ಕಾಶಿಲಿಂಗಪ್ಪ, ಕೆ.ಶ್ರೀನಿವಾಸ, ಬಿ.ನೀಲಪ್ಪ, ಬಿ.ಶಂಕರ, ಗೋಪಾಲ, ಜೆ.ಬಸವರಾಜ, ಕೊಟ್ರೇಶ, ವೆಂಕಟೇಶ, ಅಂಬರೇಶ, ಗೋವಿಂದಪ್ಪ, ಹನುಮಂತಪ್ಪ, ವಾಬುಸಾಬ್ ಸೇರಿದಂತೆ ರೈತರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ