ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ರಾಮನಹಳ್ಳಿ ಗ್ರಾಮ ಪಂಚಾಯತ ಚನ್ನಪ್ಪ ಗುರುಲಿಂಗಪ್ಪ ಹಚಡದ ಅವರು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಸದಸ್ಯ ರಾಮಣ್ಣ ಹಳೇಮನಿ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಮೋಜಿ ಅಗ್ನಿ ಮತ್ತು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಪ್ರಭಾವತಿ ಕುಂಬಾರ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ವಿಠ್ಠಲ ಸಿಂಧನಕೇರಿ, ಪಿಕೆಪಿಎಸ್ ಅಧ್ಯಕ್ಷ ಭೀಮರಾಯ ನಂದರಗಿ, ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲ್ಲೂಕಾಧ್ಯಕ್ಷ ಅಶೋಕ ಕೊಳಾರಿ, ಎಪಿಎಂಸಿ ಅಧ್ಯಕ್ಷ ಬಸವರಾಜ ಬಾಗೇವಾಡಿ, ಸಂಜೀವಕುಮಾರ ಯಂಟಮಾನ, ಪ್ರಕಾಶ ಉಪ್ಪಿನ, ಮಹಾಂತೇಶ ಮಡ್ಯಾಳ, ಎ.ಎಂ ಅಷ್ಟಗಿ, ಗುಂಡು ಚಾವರ, ಸುವರ್ಣ ಬೂದಿಹಾಳ, ಶ್ರೀಶೈಲ ಪೂಜಾರಿ ಸೇರಿದಂತೆ ಗ್ರಾಮ ಪಂಚಾಯತ ಸದಸ್ಯ ಮತ್ತು ಗ್ರಾಮಸ್ಥರಿದ್ದರು.
ವರದಿ. ಹಣಮಂತ ಚ. ಕಟಬರ್
