ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಡಗರ ಸಂಭ್ರಮದಿಂದ ಕಾರ ಹುಣ್ಣಿಮೆ ಆಚರಿಸಿದ ಅನ್ನದಾತರು

ಯಾದಗಿರಿ/ಗುರುಮಠಕಲ್: ನಮ್ಮ ಗುರುಮಠಕಲ್ ತಾಲೂಕಿನ ಕಾರ ಹುಣ್ಣಿಮೆ ತುಂಬಾ ವಿಶೇಷ ನೋಡ್ರಿ, ಬಹಳ ವರ್ಷಗಳಿಂದ ಕಾರ ಹುಣ್ಣಿಮೆ ಬಂತು ಅಂದ್ರೆ ನಮ್ಮ ರೈತರಿಗೆ ಎಲ್ಲಿಲ್ಲದ ಖುಷಿ, ಅದರಲ್ಲೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ರೈತರು, ತಮ್ಮ ಮಕ್ಕಳು ಹಾಗೂ ಕುಟುಂಬಸ್ಥರೊಂದಿಗೆ ಕಾರ ಹುಣ್ಣಿಮೆಯನ್ನು ಸಂಭ್ರಮದಿಂದ ಆಚರಣೆ ಮಾಡುತ್ತಾ ಬಂದಿದ್ದಾರೆ.

ಕಾಕಲವರ ಸಂಸ್ಥಾನದ ರಾಜಾ ಲಕ್ಷ್ಮಣಪ್ಪ ದೊರೆ ಸಂಸ್ಥಾನದ ಎತ್ತುಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಾಡಿಕೆ, ನಾರಾಯಣಪುರ ಕಮಾನಿನ ಮುಖಾಂತರ ಮೂರು ಬಾರಿ ಸಂಚರಿಸಿದ ನಂತರ ಕಮಾನಿನ ಒಂದು ಕಡೆಯಿಂದ ಇನ್ನೊಂದು ಕಡೆ ಹಗ್ಗ ಬೀಸಲಾಗುತ್ತೆ ಎರಡು ಪ್ರಯತ್ನದ ನಂತರ ಹಗ್ಗ ಬಿದ್ದ ನಂತರ ಮಾವಿನ ತೋರಣ ಕಡೆಯಲಾಗುತ್ತೆ.

ನಮ್ಮ ಜನ ಬೆಳಿಗ್ಗೆಯಿಂದಲೇ ಎತ್ತುಗಳ ಮೈ ತೊಳೆಯುವದು, ಅವುಗಳಿಗೆ ಬಣ್ಣ ಹಚ್ಚಿ ಅವುಗಳ ಕೊರಳಲ್ಲಿ ಗೆಜ್ಜೆ ಸರ ಸೇರಿದಂತೆ ವಿವಿಧ ಅಲಂಕಾರಿಕ ವಸ್ತುಗಳನ್ನು ಹಾಕಿ ಭರ್ಜರಿಯಾಗಿ ತಯಾರು ಮಾಡುತ್ತಾರೆ. ಹೋಳಿಗೆ ಸೇರಿದಂತೆ ಬಗೆಬಗೆಯ ಸಿಹಿ ಅಡುಗೆಯನ್ನು ಮನೆಯಲ್ಲಿ ಮಾಡಿ ತಮ್ಮ ಮನೆಯಲ್ಲಿರುವ ಎತ್ತುಗಳಿಗೆ ಹೋಳಿಗೆ ಸೇರಿದಂತೆ ಸಿಹಿ ತಿನಿಸುಗಳನ್ನು ತಿನ್ನಿಸಿ, ನಂತರ ಮುಖ್ಯ ಬೀದಿಗಳಲ್ಲಿ ತಮಟೆ ವಾದ್ಯಗಳ ಮುಖಾಂತರ ಮೆರವಣಿಗೆ ಮಾಡಿ ಖುಷಿಪಟ್ಟರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ