ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜಕೀಯ ಪ್ರೇರಿತ ಇ.ಡಿ ದಾಳಿ : ಶಾಸಕ ಜೆ.ಎನ್.ಗಣೇಶ

ಬಳ್ಳಾರಿ / ಕಂಪ್ಲಿ : ಇ.ಡಿ ಅಧಿಕಾರಿಗಳು ನಮ್ಮ ಮನೆ ಮೇಲೆ ದಾಳಿ ಮಾಡಿರುವುದು ನಿಜ. ಆದರೆ, ಅಧಿಕಾರಿಗಳು ಕೆಲ ವಿಷಯಗಳನ್ನು ನಮ್ಮೊಂದಿಗೆ ಚರ್ಚಿಸಿ, ನಂತರ ಬಂದ ದಾರಿಗೆ ಸುಂಕವಿಲ್ಲದಂತೆ ಹೋಗಿದ್ದಾರೆ. ಇದು ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಇದಕ್ಕೆ ನಾವು ಜಗ್ಗುವುದಿಲ್ಲ ಎಂದು ಶಾಸಕ ಜೆ. ಎನ್. ಗಣೇಶ ಹೇಳಿದರು.
ಅವರು ಗುರುವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಸಂಸದರ ಮತ್ತು ಶಾಸಕರ ಮೇಲೆ ಇ.ಡಿ ದಾಳಿ ಮಾಡಿಸಿ, ಬಿಜೆಪಿಯವರು ಇ.ಡಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜಕೀಯ ಕುತಂತ್ರದಿಂದ ಕಾಂಗ್ರೆಸ್ ಶಾಸಕರ ವರ್ಚಸ್ಸು ಕುಗ್ಗಿಸುವ ಫಲ ನೀಡಲಿಲ್ಲ. ಜನರಿಗೆ ತಪ್ಪು ಸಂದೇಶ ರವಾನಿಸುವ ಕೆಲಸ ಮಾಡುತ್ತಿದ್ದಾರೆ. ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಶೇ.90 ರಷ್ಟು ಹಣ ವಾಪಸ್ಸಾಗಿದೆ. ಈ ಹಿಂದೆ ನಡೆದ ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಇಡಿ ಅಧಿಕಾರಿಗಳು ಪಡೆದುಕೊಂಡರು. ಕಾನೂನಾತ್ಮಕವಾಗಿ ಪ್ರತಿಯೊಂದು ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿರುವೆ. ಲೋಕಸಭೆಯಲ್ಲಿ ಜನರು ಪಂಚಯೋಜನೆಗಳನ್ನು ಮನಗಂಡು ಕಾಂಗ್ರೆಸ್ ಬಾವುಟ ಹಾರಿಸಿದ್ದಾರೆ. ನಮ್ಮ ಮೇಲೆ ಯಾವುದೇ ಒಂದು ಕಪ್ಪುಚುಕ್ಕಿ ಇಲ್ಲ. ಇಡಿಯಿಂದ ನಮ್ಮ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದೆ. ಕ್ಷೇತ್ರದಲ್ಲಿ ಕೆಲಸ ಮಾಡಲು ಇನ್ನಷ್ಟು ಶಕ್ತಿ ಬಂದಿದೆ ಎಂದರು.

ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ ಅಧ್ಯಕ್ಷ ಹಬೀಬ್ ರೆಹಮಾನ್, ಪುರಸಭೆ ಸದಸ್ಯ ಸಿ. ಆರ್. ಹನುಮಂತ, ಕುರುಗೋಡು ಬ್ಲಾಕ್ ಅಧ್ಯಕ್ಷ ಚನ್ನಬಸವರಾಜಗೌಡ, ಮುಖಂಡರಾದ ಬಿ.ನಾರಾಯಣಪ್ಪ, ಕೆ. ಷಣ್ಮುಖಪ್ಪ, ಜಾಫರ್ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ