ಕಲಬುರಗಿ/ ಕಮಲಾಪುರ: ರೈತರ ಹಬ್ಬವಾದ ಕಾರ ಹುಣ್ಣಿಮೆ ಹಬ್ಬ ರೈತರು ಎತ್ತುಗಳಿಗೆ ಸ್ನಾನ ಮಾಡಿಸಿ ವಿವಿಧ ಬಣ್ಣಗಳಿಂದ ಅಲಂಕರಿಸಿ ಎತ್ತುಗಳ ಮೆರವಣಿಗೆ ನಡೆಸಿದರು.
ಪ್ರತಿ ವರ್ಷದಂತೆ ಈ ವರ್ಷ ಕೂಡ ರೈತರ ಹಬ್ಬವಾದ ಕಾರಹುಣ್ಣಿಮೆಯನ್ನು ಅದ್ದೂರಿಯಾಗಿ ಎತ್ತುಗಳಿಗೆ ಸಿಂಗರಿಸಿ ತಾಲೂಕಿನ ಕುರಿಕೋಟಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಾಜಾ ಭಜಂತ್ರಿ ಯೊಂದಿಗೆ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಅಜರ ಪಟೇಲ, ರವಿ ಪಾಟೀಲ, ಅನೀಲ ಮೊಮ್ಮ, ದಸ್ತಗೀರ ಮುಲ್ಲಾ, ಶರಣು ಬೆಡಜೇವರ್ಗಿ, ಬಸವರಾಜ ಕಲ್ಲೂರ ಸೇರಿದಂತೆ ಗ್ರಾಮದ ಮುಖಂಡರು ಭಾಗವಹಿಸಿದ್ದರು.
- ಕರುನಾಡ ಕಂದ
