ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಯಾಣಿಕರ ಗಮನಕ್ಕೆ: ತತ್ಕಾಲ್​ ರೈಲ್ವೆ ಟಿಕೆಟ್​ ಬುಕಿಂಗ್​ಗೆ ಹೊಸ ರೂಲ್ಸ್: ಜುಲೈ​ 1ರಿಂದ ಜಾರಿ

ನವದೆಹಲಿ : ಭಾರತೀಯ ರೈಲ್ವೆ ಸಚಿವಾಲಯವು ತತ್ಕಾಲ್​ ಟಿಕೆಟ್​ ಬುಕಿಂಗ್ ನಿಯಮಯದಲ್ಲಿ ಹೊಸ ಬದಲಾವಣೆ ಮಾಡಿದೆ. ತತ್ಕಾಲ್​ ಟಿಕೆಟ್​ ಬುಕಿಂಗ್​ ಮಾಡಬೇಕೆಂದರೆ IRCTC ಅಧಿಕೃತ ವೆಬ್​ಸೈಟ್​ ಅಥವಾ ಆ್ಯಪ್​​ ಗೆ ಆಧಾರ್​ ಲಿಂಕ್​ ಆಗಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಇನ್ಮುಂದೆ ಆಧಾರ್ ಲಿಂಕ್​ ಹೊಂದಿರುವ ಬಳಕೆದಾರರು ಮಾತ್ರ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಏಜೆಂಟ್​ ಗಳ ಮೇಲೆ ಸಮಯದ ನಿರ್ಬಂಧ ಹೇರಿದೆ. ಈ ಬಗ್ಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹೊಸ ನಿಯಮ ಜುಲೈ 1ರಿಂದ ಈ​ ಜಾರಿಗೆ ಬರಲಿದೆ ಎಂದು ರೈಲ್ವೆ ಸಚಿವಾಲ ತಿಳಿಸಿದೆ.

ಕಂಪ್ಯೂಟರ್​ ಆಧಾರಿತ OTP ಯ ದೃಢೀಕರಣದ ನಂತರವೇ ಭಾರತೀಯ ರೈಲ್ವೆ ಅಥವಾ ಅಧಿಕೃತ ಏಜೆಂಟ್‌ಗಳ ಮೂಲಕ ಬುಕಿಂಗ್ ಮಾಡಲು ತತ್ಕಾಲ್ ಟಿಕೆಟ್‌ಗಳು ಲಭ್ಯವಿರುತ್ತವೆ. ಇದನ್ನು ಬಳಕೆದಾರರು ಬುಕಿಂಗ್ ಸಮಯದಲ್ಲಿ ಒದಗಿಸಿದ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ವ್ಯವಸ್ಥೆಯಲ್ಲಿ ಆದ ಮಾರ್ಪಾಡು ಮತ್ತು ಬದಲಾವಣೆಗಳನ್ನು ಎಲ್ಲಾ ವಲಯ ರೈಲ್ವೆಗಳಿಗೆ ತಿಳಿಸಲು ಸಚಿವಾಲಯವು ರೈಲ್ವೆ ಮಾಹಿತಿ ವ್ಯವಸ್ಥೆಗಳ ಕೇಂದ್ರ (CRIS) ಮತ್ತು IRCTC ಗೆ ನಿರ್ದೇಶಿಸಿದೆ. ಜೊತೆಗೆ, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸಲು ವ್ಯಾಪಕ ಪ್ರಚಾರ ಮಾಡಲಾಗುವುದು ಎಂದು ತಿಳಿಸಿದೆ. ಇನ್ನು ತತ್ಕಾಲ್ ಯೋಜನೆಯ ಪ್ರಯೋಜನಗಳನ್ನು ಸಾಮಾನ್ಯ ಬಳಕೆದಾರರು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯವು ರೈಲ್ವೆಯ ಎಲ್ಲಾ ವಲಯಗಳಿಗೆ ಮಾಹಿತಿ ನೀಡಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ