ಬೆಳಗಾವಿ :ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮಾಜಿ ಉಪ ಮುಖ್ಯಮಂತ್ರಿಗಳು, ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ಅಥಣಿ ತಾಲೂಕಿನ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪ ಸಂಖ್ಯಾತರ ಇಲಾಖೆ, ಹಿಂದುಳಿದ ಕಲ್ಯಾಣ ಇಲಾಖೆ, ತೋಟಗಾರಿಕೆ ಇಲಾಖೆಯ ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಲಕ್ಷ್ಮಣ ಸವದಿ ಅವರು ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಇದೇ ಸಮಯದಲ್ಲಿ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಸತ್ಕಾರ ಕೂಡ ನಡೆಯಿತು.
ಈ ಕಾರ್ಯಕ್ರಮದಲ್ಲಿ ಅಥಣಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ M G ಮೋರಟಗಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ S B ಕಲ್ಲಾಪುರ, ಸಿ ,ಎಸ್ ಕಿತ್ತೂರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ S G ಸಲಗರ ಸೇರಿದಂತೆ ಇನ್ನುಯ್ ಅನೇಕ ಅಧಿಕಾರಿಗಳು ಮತ್ತು ಶಿಕ್ಷಕರು ಪಾಲ್ಗೊಂಡಿದ್ದರು.
ವರದಿ. ವಿಠ್ಠಲ ಖೋಕಾಟೆ
