ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾವಲು ಪಡೆ ವತಿಯಿಂದ ಗೌರವ ಸನ್ಮಾನ

ಚಾಮರಾಜನಗರ/ ಗುಂಡ್ಲುಪೇಟೆ :
ಕರ್ನಾಟಕ ಕಾವಲು ಪಡೆಯ ವತಿಯಿಂದ ದಿ. 13/06/2025ರಂದು ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಗ್ರಾಮದ ಬುಡಕಟ್ಟು ಗಿರಿಜನ ಕಾಲೋನಿಯ ಡಾ. ರತ್ನಮ್ಮರವರ ಸಾಮಾಜಿಕ ಸೇವೆ ಹಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ನಿರಂತರವಾಗಿ ಸಲ್ಲಿಸುತ್ತಿದ್ದು ಇವರ ಸೇವೆಯನ್ನು ಗುರುತಿಸಿ ವಾಲ್ಮೀಕಿ ಪ್ರಶಸ್ತಿ ಹಾಗೂ ಜಾನಪದ ಸಾರ್ವಭೌಮ ಪ್ರಶಸ್ತಿ ದೊರಕಿದೆ ಇದನ್ನು ಗುರುತಿಸಿ ಕಾವಲು ಪಡೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಮಾತನಾಡಿ ರತ್ನಮ್ಮರವರ ಸಾಮಾಜಿಕ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಕನ್ನಡಪರ ಹಿರಿಯ ಹೋರಾಟಗಾರರಾದ ಬ್ರಹ್ಮಾನಂದ್ ಹಾಗೂ ಗಡಿನಾಡು ವನ್ಯ ಜೀವಿ ಸಂರಕ್ಷಣಾ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಪಿ.ಬಾಲು ಮಾತನಾಡಿ ಕಾವಲು ಪಡೆಯ ನಿರಂತರ ಕಾರ್ಯ ವೈಖರಿಯನ್ನು ಮೆಲುಕು ಹಾಕಿದರು ಇದೇ ವೇಳೆ ತಾಲ್ಲೂಕು ಕಾರ್ಯದರ್ಶಿಗಳಾದ ಎಸ್.ಮುಬಾರಕ್, ತಾಲ್ಲೂಕು ಗೌರವಾಧ್ಯಕ್ಷರಾದ ರಾಮೇಗೌಡ, ತಾಲ್ಲೂಕು ಸಂಚಾಲಕರಾದ ಕುಂಜುಟ್ಟಿ, ಟೌನ್ ಉಪಾಧ್ಯಕ್ಷರಾದ ಸಾದಿಕ್ ಪಾಷ, ಟೌನ್ ಯುವಘಟಕದ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್, ಟೌನ್ ಸಂಚಾಲಕರಾದ ಮಿಮಿಕ್ರಿರಾಜು, ಅಬ್ದುಲ್ ರಾಜಿಕ್, ರವಿಕುಮಾರ್, ಬುಡಕಟ್ಟು ಜನಾಂಗದ ಮಹಿಳೆ ಮಾದೇವಮ್ಮ, ರಮೇಶ ಹಾಜರಿದ್ದರು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ