ಯಾದಗಿರಿ/ಗುರುಮಠಕಲ್: ನಾಳೆ ಯಾದಗಿರಿಯಲ್ಲಿ ಜರುಗಲಿರುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮದ ಪೂರ್ವ ಸಿದ್ಧತೆ ಪ್ರಯುಕ್ತ ಇಂದು ಹೈದರಾಬಾದ್ ವಿಮಾನ ನಿಲ್ದಾಣದಿಂದ ಯಾದಗಿರಿ ಹೋಗುವಾಗ ಮಾರ್ಗ ಮಧ್ಯದಲ್ಲಿ ಗುರುಮಠಕಲ್ ಪ್ರವಾಸಿ ಮಂದಿರಕ್ಕೆ ದಿನೇಶ್ ಗುಂಡೂರಾವ್ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರಕಾರ ಭೇಟಿ ನೀಡಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಮಂಡಳಿಯ ‘ಆರೋಗ್ಯ ಆವಿಷ್ಕಾರ’ ಯೋಜನೆಯಡಿ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಸುಮಾರು 440.68 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಗುರುಮಠಕಲ್ ಆರೋಗ್ಯ ಸಮುದಾಯದ ವೈದ್ಯಾಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕ ವೈದ್ಯಾಧಿಕಾರಿಗಳು ಹೊಸ ತಾಲೂಕು ಆಗಿರುವ ಗುರುಮಠಕಲ್ ಇಲ್ಲಿನ ಆಸ್ಪತ್ರೆಯನ್ನು ತಾಲೂಕ ಆಸ್ಪತ್ರೆ ಎಂದು ಘೋಷಣೆ ಮಾಡಿ ಹೆಚ್ಚುವರಿಯಾಗಿ ವೈದ್ಯರನ್ನು ಮತ್ತು ನೂರು ಹಾಸಿಗೆಯುಳ್ಳ ಆಸ್ಪತ್ರೆಯಾಗಿ ಪರಿವರ್ತಿಸಲು ಮನವಿ ನೀಡಿದರು.
ಕಾಂಗ್ರೆಸ್ ಪಕ್ಷದ ವಿವಿಧ ಮುಖಂಡರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸಾರ್ವಜನಿಕರು ಭೇಟಿಯಾದರು.
ವರದಿ: ಜಗದೀಶ್ ಕುಮಾರ್ ಭೂಮಾ
