ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಣಬೆ ಬೆಳೆಯುವುದರಿಂದ ಆರ್ಥಿಕವಾಗಿ ಸಬಲರಾಗಲು ಸಾಧ್ಯ :ಯೋಜನಾಧಿಕಾರಿ ವಿನೋದ ಕುಮಾರ

ಬಳ್ಳಾರಿ / ಕಂಪ್ಲಿ : ಪ್ರತಿಯೊಬ್ಬರೂ ಹಣಬೆ ಬೆಳೆಯುವುದರಿಂದ ಸ್ವಯಂ ಉದ್ಯೋಗ ಜೊತೆಗೆ ಹೆಚ್ಚಿನ ಲಾಭ ಪಡೆಯಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ವಿನೋದ ಕುಮಾರ ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತಾಲೂಕು ಪಂಚಾಯಿತಿ ಮತ್ತು ಕೆನರಾ ಬ್ಯಾಂಕ್ ತರಬೇತಿ ಸಂಸ್ಥೆಯಲ್ಲಿ ಅಡಿಯಲ್ಲಿ ಏರ್ಪಡಿಸಿದ ಅಣಬೆ ತಯಾರಿಕೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ವಸಹಾಯ ಸಂಘದ ಯುವಕ ಮತ್ತು ಯುವತಿಯರು ಅಣಿಬೆ ಬೆಳೆಯುವದರಿಂದ ಖರ್ಚು ಕಡಿಮೆ ಹೆಚ್ಚು ಲಾಭ, ಜೊತೆಗೆ ಬ್ಯಾಂಕ್‌ನಿಂದ ಸಾಲ ಸೌಲಭ್ಯ ಜತೆಗೆ ಸಹಾಯಧನ ಪಡೆಯಬಹುದು ಅಣಬೆ ತಿನ್ನುವುದರಿಂದ ಮನುಷ್ಯನಿಗೆ ಪೌಷ್ಟಿಕಯುಕ್ತ ಆಹಾರ ಪಡೆಯಬಹುದು ಕೃಷಿ ಜೊತೆಗೆ ಹೈನುಗಾರಿಕೆ ಕೋಳಿ ಕುರಿ ಸಾಗಣಿಕೆ ಇವೆಲ್ಲವನ್ನೂ ಜೀವನದಲ್ಲಿ ಅಳವಡಿಕೊಳ್ಳುವುದರಿಂದ ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದರು.
ಕೆನರಾ ಬ್ಯಾಂಕ್ ತರಬೇತಿ ಸಂಸ್ಥೆಯ ತರಬೇತುದಾರರಾದ ಜಿ. ಜಡೇಪ್ಪ ಮಾತನಾಡಿ ಅಣಬೆ ಲಾಭದ ಬಗ್ಗೆ ಮತ್ತು ಮಾರುಕಟ್ಟೆ ಮಾರಾಟ ಬ್ಯಾಂಕ್‌ನಿಂದ ಸಾಲ ಸೌಲಭ್ಯ ಪಡಯವುದರ ಬಗ್ಗೆ ಮಾಹಿತಿ ನೀಡಿದರು. 35 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಜಿಲ್ಲಾ ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ ತಾಪಂ ಇ.ಓ ಶ್ರೀ ಕುಮಾರ ಜಿಲ್ಲಾ ಕೃಷಿ ಕೇಂದ್ರದ ಅಧಿಕಾರಿ ಅಭಿಲಾಷ, ಹಿರಿಯ ವಿಜ್ಞಾನಿ ಡಾ. ಶಿಲ್ಪಾ , ಕೆನರಾ ಬ್ಯಾಂಕ್ ತರಬೇತಿ ಸಂಸ್ಥೆ ನಿರ್ದೇಶಕ ರಾಜಸಾಭ್ , ಜಿಲ್ಲಾ ಯೋಜನಾ ಪ್ರಯೋಜನ [ ಎನ್ ಆರ್ ಎಲ್ ಎಂ] ಅಧಿಕಾರಿ ರಾಜೇಂದ್ರ ಸೇರಿ ಅನೇಕ ಶಿಬಿರಾರ್ಥಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ