ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೋಟೆ-ರಾಮಸಾಗರ ಬನವಾಸಿ ಸಿಸಿ ರಸ್ತೆ ಅಭಿವೃದ್ಧಿಗೆ ಶಾಸಕ ಗಣೇಶ ಶಂಕುಸ್ಥಾಪನೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕಂಪ್ಲಿ-ಕೋಟೆಯ ತುಂಗಭದ್ರಾ ನದಿ ಬಳಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಪಥ ಯೋಜನೆಯಡಿ ಸುಮಾರು 509.9 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಕೋಟೆಯಿಂದ ರಾಮಸಾಗರವರೆಗಿನ ಬನವಾಸಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ ಶನಿವಾರ ಭೂಮಿ ಪೂಜೆ ಸಲ್ಲಿಸಿದರು.
ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಕಂಪ್ಲಿ-ಕೋಟೆ ಪ್ರದೇಶದಿಂದ ರಾಮಸಾಗರವರೆಗೆ ಸಿಸಿ ರಸ್ತೆ ಮಾಡಲಾಗುತ್ತಿದ್ದು, ಇಲ್ಲಿನ ರೈತರು ಸಹಕಾರದಿಂದ ಒಳ್ಳೆಯ ರಸ್ತೆ ಮಾಡಿಸಿಕೊಳ್ಳಬೇಕು. ಉಳಿದ ಬನವಾಸಿ ರಸ್ತೆಯನ್ನು ಕೆಕೆಆರ್‌ಡಿಬಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು. ಅತಿ ಶೀಘ್ರದಲ್ಲೇ ಜವುಕು-ದೇವಸಮುದ್ರ, ಸೋಮಸಮುದ್ರ-ಮದುರೆ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ಇಡಿ ಅಧಿಕಾರಿಗಳು ಮನೆಗೆ ದಾಳಿ ಮಾಡಿದಾಗ ಮಹಜರು ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ. ಆದರೆ, ಕೆಲವೊಂದು ಪತ್ರಿಕೆಯಲ್ಲಿ 5 ಕೆಜಿ ಬಂಗಾರ, 200 ಎಕರೆ ಭೂಮಿ ದಾಖಲೆಗಳು ಸಿಕ್ಕಿವೆ ಎಂದು ಸುಳ್ಳು ಸುದ್ದಿ ಬಿತ್ತರಿಸಿದ್ದು, ಇಂತಹವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಮಾಧ್ಯಮದ ಮೇಲೆ ನಂಬಿಕೆ ಇದೆ. ಆದರೆ, ಸುಳ್ಳು ವರದಿ ಮಾಡಿದರೆ ನಂಬಿಕೆ ಉಳಿಯುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಲೊಡ್ಡು ಹೊನ್ನೂರವಲಿ, ಸಿ.ಆರ್.ಹನುಮಂತ, ರೈತ ಸಂಘದ ಅಧ್ಯಕ್ಷ ನವೀನ್ ಮಣ್ಣೂರು, ಮುಖಂಡರಾದ ಕೆ.ಎಂ.ಹೇಮಯ್ಯಸ್ವಾಮಿ, ಕೆ.ಚಂದ್ರಶೇಖರ, ಹೊನ್ನೂರವಲಿ, ವಾಬುಸಾಬ್, ಕೆ.ಮಂಜು, ಎ.ಪರಶಪ್ಪ, ಶಂಕರ್, ಕೆ.ಷಣ್ಮುಕಪ್ಪ, ಕರಿಬಸವನಗೌಡ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ