ಬಳ್ಳಾರಿ / ಕಂಪ್ಲಿ : ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆರಂಭಿಸುವಂತೆ ಒತ್ತಾಯಿಸಿ ಇಲ್ಲಿಯ ಕರವೇ ( ಪ್ರವೀಣ್ ಶೆಟ್ಟಿ ಬಣ) ಜಿಲ್ಲಾ ಸಂಚಾಲಕ ಹಾಗೂ ಕಂಪ್ಲಿ ತಾಲೂಕು ಅಧ್ಯಕ್ಷ ಬಿ. ರಮೇಶ ಒತ್ತಾಯಿಸಿದರು.
ಅವರು ಮಾತನಾಡಿ ಕಂಪ್ಲಿಯಲ್ಲಿ ಬಿಇಓ ಕಚೇರಿ ಆರಂಭಕ್ಕೆ ಸಂಬಂಧಪಟ್ಟಂತೆ ಕಲಬುರ್ಗಿಯ ಶಾಲಾ ಶಿಕ್ಷಣ ಇಲಾಖೆ ವಿಭಾಗದ ಹೆಚ್ಚುವರಿ ಆಯುಕ್ತರು 2025ರ ಏಪ್ರಿಲ್ 23ರಂದು ಸುತ್ತೋಲೆ ಹೊರಡಿಸಿ ಬಿಇಒ ಕಚೇರಿ ಆರಂಭಿಸುವಂತೆ ಸೂಚಿಸಿದ್ದರು, ಆದರೆ ಕುರುಗೋಡು ಪಟ್ಟಣದಲ್ಲಿರುವ ಪಶ್ಚಿಮ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಕಂಪ್ಲಿ ಸೇರ್ಪಡೆಗೊಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಕಂಪ್ಲಿ ಬಿಇಒ ಕಛೇರಿಯಿಂದ ವಂಚಿತವಾಗಿದ್ದು 30 ಕಿಲೋಮೀಟರ್ ದೂರದ ಕುರುಗೋಡಿಗೆ ಅಲೆಯಬೇಕಾದ ಅನಿರ್ವಾರ್ಯತೆ ಎದುರಾಗಿದೆ ಎಂದರು.
ಬಿಇಓ ಕಚೇರಿ ಆರಂಭದಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಅನುಕೂಲವಾಗಲಿದೆ ಸರ್ಕಾರ ಕಂಪ್ಲಿ ಪಟ್ಟಣದಲ್ಲಿ ಆರಂಭಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರವೇ ಪದಾಧಿಕಾರಿಗಳು ಹಾಜರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್
