ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿಯಮ ಮೀರಿ ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೋ, ವ್ಯಾನ್​ ಚಾಲಕರೇ ಹುಷಾರ್ : ಪಿಎಸ್ಐ ಬಸವರಾಜ್ ಜಿ. ಕೆ.

ಚಿಕ್ಕಮಗಳೂರು / ಕೊಪ್ಪ : ನಗರದಲ್ಲಿ ಶಾಲಾ ಮಕ್ಕಳನ್ನು ಸಾಮರ್ಥ್ಯಕ್ಕಿಂತ ಅಧಿಕ ಸಂಖ್ಯೆಯಲ್ಲಿ ಆಟೋ, ವ್ಯಾನ್​​ಗಳಲ್ಲಿ ಶಾಲೆ ಕರೆದೊಯ್ಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.‌ ಇದು ಅಪಾಯಕಾರಿ ಆಗಿದೆ. ಇದನ್ನು ಮನಗಂಡ ಪೋಲೀಸರು ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಖುದ್ದು ಪಿಎಸ್ಐ ಬಸವರಾಜ್ ಜಿ. ಕೆ. ಅವರೇ ತಮ್ಮ ಸಿಬ್ಬಂದಿಯೊಂದಿಗೆ ವಿಶೇಷ ಕಾರ್ಯಾಚರಣೆಗಿಳಿದಿದ್ದಾರೆ.
ದಿನಾಂಕ 14.06.2025 ರಂದು ಶಾಲೆಗಳಿಂದ ಮಕ್ಕಳನ್ನು ಆಟೋಗಳ ಡ್ರೈವರ್ ಸೀಟಿನಲ್ಲಿ ಕೂರಿಸಿಕೊಂಡು ಹೋಗುವುದನ್ನು ಗಮನಿಸಿ
ಶಾಲಾ ಮಕ್ಕಳ ಸುರಕ್ಷತೆಯಿಂದ ಮಕ್ಕಳನ್ನು ಡ್ರೈವರ್ ಸೀಟಿನಿಂದ ಇಳಿಸಿ ಹಿಂಬದಿ ಸೀಟಿನಲ್ಲಿ ಕೂರಿಸಿ ಆಟೋ ಚಾಲಕರಿಗೆ ತಿಳುವಳಿಕೆ ನೀಡಿ ಆಟೋ ಮುಂದೆ ಹಾಗೂ ಹಿಂದೆ ಸಾಮರ್ಥ್ಯಕ್ಕಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಬಾರದು. ನಿಯಮ ಮೀರಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆ ಮೀರಿ ನಿಯಮ ಉಲ್ಲಂಘಿಸುವವರ ವಾಹನ ಸೀಜ್ ಮಾಡುವುದಾಗಿ ವಾರ್ನಿಂಗ್ ಮಾಡಿದ್ದಾರೆ. ಅಲ್ಲದೇ ಈ ವಿಚಾರವಾಗಿ ಸಂಚಾರ ನಿಯಮಗಳನ್ನು ಪಾಲಿಸಲು ಜಾಗೃತಿ ಮೂಡಿಸಿದರು.

ಈ ಬಗ್ಗೆ ಪಿಎಸ್ಐ ಬಸವರಾಜ್ ರವರ ಕಾರ್ಯ ಮೆಚ್ಚಿ ಸಾರ್ವಜನಿಕರು ಹಾಗೂ ಮಕ್ಕಳ ಪೋಷಕರು ಪ್ರಶಂಶಿಸಿರುತ್ತಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ