ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಬಳ್ಳೇಕೆರೆ ವಿಶ್ವನಾಥ್

ಚಿಕ್ಕಮಂಗಳೂರು/ ಕಡೂರು : ರೈತರ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ದೊರಕಿಸಿಕೊಡುವ ರೈತ ಬಜಾರ್ ರಾಜ್ಯಾದ್ಯಂತ ಸಹಕಾರ ಸಂಘಗಳ ಮೂಲಕ ಸ್ಥಾಪಿತವಾದರೆ ದೇಶಿ ಉತ್ಪನ್ನಗಳಿಗೆ ಉತ್ತಮ ಬೆಲೆ ಲಭಿಸಲಿದೆ ಎಂದು ಹಾಸನ ಹಾಲು ಒಕ್ಕೂಟದ ನಿರ್ದೇಶಕ ಸೋನಾಲ್ ಧರ್ಮೇಗೌಡ ತಿಳಿಸಿದರು. ಕಡೂರು ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಆವರಣದಲ್ಲಿ ಶನಿವಾರ ಪ್ರಗತಿ ರೈತ ಉತ್ಪಾದಕರ ಕಂಪನಿ ವತಿಯಿಂದ ತಾಲ್ಲೂಕಿನ ರೈತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ರಿಯಾಯಿತಿ ಕಾರ್ಡುಗಳ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ರೈತ ಬಜಾರ್ ಜಿಲ್ಲೆಯಲ್ಲಿಯೇ ಪ್ರಥಮವಾಗಿ ಕಡೂರು ಪಟ್ಟಣದಲ್ಲಿ ಆರಂಭವಾಗಿದ್ದು ಸಾವಯುವ ಕೃಷಿಗೆ ಉತ್ತೇಜನ ಮತ್ತು ಸಾವಯುವ ಆಹಾರ ಮತ್ತಿತರ ಪದಾರ್ಥಗಳಿಗೆ ಮಾರುಕಟ್ಟೆ ಕಲ್ಪಿಸಿ ಸಹಕಾರ ಸಂಘಗಳಿಗೆ ರೈತರಿಗೆ ಉತ್ತಮ ಬೆಲೆ ನೀಡಿ ಖರೀದಿದಾರರಿಗೂ ಶೇಕಡಾ 5 ರ ರಿಯಾಯಿತಿಯಲ್ಲಿ ಮಾರಾಟ ಮಾಡುತ್ತಿರುವ ಬಳ್ಳೆಕೆರೆ ವಿಶ್ವನಾಥ್ ಮತ್ತು ಅವರ ಎಲ್ಲಾ ನಿರ್ದೇಶಕರ ರೈತ ಕಾಳಜಿ ಮೆಚ್ಚುವಂತದ್ದು ಎಂದು ಶ್ಲಾಘಿಸಿದರು. ಹಾಸನ ಹಾಲು ಒಕ್ಕೂಟದ ನಿರ್ದೇಶಕ ಬಿದರ ಜಗದೀಶ್ ಮಾತನಾಡಿ ಕಡೂರು ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕರ ಸಂಘಗಳ ಸದಸ್ಯರಿಗೆ ರೈತ ಬಜಾರ್ ರಿಯಾಯಿತಿ ಕಾರ್ಡ್ ನೀಡಿರುವುದು ಎಂದು ಮೆಚ್ಚುಗೆ ತಿಳಿಸಿದರು.
ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಬಳ್ಳೆಕೆರೆ ವಿಶ್ವನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಸ್ವತಿಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಂಸಾಗರ ಸೋಮಶೇಖರ್ ರೈತರ ಮಕ್ಕಳ ವ್ಯಾಸಂಗದ ಬದುಕಿಗೆ ಗೌರವಿಸುತ್ತಿರುವುದು ಹೆಮ್ಮೆಯ ಸಂಗಾತಿ ಈ ನಿಟ್ಟಿನಲ್ಲಿ ಶೈಕ್ಷಣಿಕ ಕಾಳಜಿಗೆ ಪ್ರೋತ್ಸಾಹಿಸುತ್ತಿರುವ ರೈತ ಬಜಾರ್ ಕಂಪನಿ ಇತರರಿಗೆ ಮಾದರಿಯಾಗಿದೆ ಎಂದರು‌.
ಈ ಸಂದರ್ಭದಲ್ಲಿ ಚಿಕ್ಕಮಂಗಳೂರು ರೈತ ಸಂಘದ ಸುನಿಲ್ ಕಾರ್ಯಧ್ಯಕ್ಷ ನಿಡಘಟ್ಟ ದಯಾನಂದ್, ಮಧುಸೂದನ್, ಧರ್ಮಣ್ಣ, ಜಯಣ್ಣ, ಸತೀಶ್ ಕುಮಾರ್ ಮತ್ತಿತರರು ಇದ್ದರು.

ವರದಿ ಶ್ರೀನಿವಾಸ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ